×
Ad

ಬಾವಿಗೆ ಹಾರಿ ಆತ್ಮಹತ್ಯೆ

Update: 2022-11-19 19:31 IST

ಉಡುಪಿ: ಪತ್ನಿಯ ಅನಾರೋಗ್ಯದಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ನ.16ರಂದು ರಾತ್ರಿ ಕೊರಂಗ್ರಪಾಡಿ ಗ್ರಾಮದ ಮಾರ್ಪಳ್ಳಿ ಎಂಬಲ್ಲಿ ನಡೆದಿದೆ.

ಮೃತರನ್ನು ಹುಬ್ಬಳ್ಳಿ ಮೂಲದ ನೂರುದಯ್ಯ ಮದರಿಮಠ (75) ಎಂದು ಗುರುತಿಸಲಾಗಿದೆ. ಇವರು ತನ್ನ ಪತ್ನಿಗೆ ಲಕ್ವ ಹೊಡೆದಿರುವ ಬಗ್ಗೆ ಮಾನಸಿಕವಾಗಿ ನೊಂದು ಮಾರ್ಪಳ್ಳಿಯಲ್ಲಿರುವ ಬಾಡಿಗೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News