ಮಂಗಳೂರು: ಆಟೋ ರಿಕ್ಷಾದಲ್ಲಿ ಸ್ಫೋಟ ಪ್ರಕರಣ; ಎಡಿಜಿಪಿ ಅಲೋಕ್ ಕುಮಾರ್ ಭೇಟಿ

Update: 2022-11-20 14:48 GMT

ಮಂಗಳೂರು : ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಸ್ಫೋಟ ನಡೆದ ಪ್ರಕರಣ ಸಂಬಂಧಿಸಿ ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ, ಎಫ್‌ಎಸ್‌ಎಲ್ ಅಧಿಕಾರಿಯಿಂದ ಮಾಹಿತಿ ಸಂಗ್ರಹಿಸಿದರು.

ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದರು ಎಂದು ತಿಳಿದುಬಂದಿದೆ.

ಆರೋಪಿಯ ಗುರುತು ಇನ್ನೂ  ಪತ್ತೆಯಾಗಿಲ್ಲ. ಆತನ ಮುಖ ಊದಿದ್ದು, ಗುರುತು ಸಿಗುತ್ತಿಲ್ಲ. ಶಂಕಿತ ಆರೋಪಿಯ ಮನೆಯವರನ್ನು ಆಸ್ಪತ್ರೆಗೆ ಬರುವಂತೆ ಸೂಚನೆ ನೀಡಲಾಗಿದೆ. ಅವರು ಬಂದು ಗುರುತು ಪತ್ತೆ ಹಚ್ಚಿದ ಬಳಿಕ ಆರೋಪಿಯ ಬಗ್ಗೆ ಪೂರ್ಣ ಮಾಹಿತಿ ನೀಡಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಕಂಕನಾಡಿ ಪೊಲೀಸ್ ಠಾಣೆ ಸಮೀಪದ ನಾಗುರಿಯಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಸ್ಫೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿ ಘಟನಾ ಸ್ಥಳಕ್ಕೆ ಇಂದು ಎನ್‌ಐಎ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.

Similar News