ಹೊಳೆನರಸೀಪುರ | ವರದಕ್ಷಿಣೆ ಕಿರುಕುಳ ಆರೋಪ: ಮಗುವಿನೊಂದಿಗೆ ತಾಯಿ ಆತ್ಮಹತ್ಯೆ

Update: 2022-11-21 15:10 GMT

ಹೊಳೆನರಸೀಪುರ, ನ.21: ತಾಲೂಕಿನ ದೊಡ್ಡಕುಂಚೆ ಗ್ರಾಮದಲ್ಲಿ  ಮಗುವಿನೊಂದಿಗೆ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. 

ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಗೆಜ್ಜೆಗಾರನಹಳ್ಳಿ ಗ್ರಾಮದ ಗೀತಾ ಎಂಬುವರ ಪುತ್ರಿ ಭವ್ಯ ಹಾಗೂ ವೇದಾಂತ್ (ಮೂರು ವರ್ಷದ ಮಗು) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಹೊಳೆನರಸೀಪುರ ತಾಲೂಕಿನ ದೊಡ್ಡ ಕೊಂಚೆ ಗ್ರಾಮದ ಅಕ್ಕಯ್ಯಮ್ಮ ಎಂಬುವರ ಪುತ್ರ ಶ್ರೀನಿವಾಸ ಎಂಬ ವ್ಯಕ್ತಿಗೆ ನಾಲ್ಕು ವರ್ಷಗಳ ಹಿಂದೆ ಭವ್ಯ ಅವರನ್ನು ಮದುವೆ ಮಾಡಿಕೊಡಲಾಗಿತ್ತು ಎನ್ನಲಾಗಿದೆ. ಆದರೆ ಅಕ್ಕಯಮ್ಮ ಹಾಗೂ ಶ್ರೀನಿವಾಸ್ ಅವರು ವರದಕ್ಷಿಣೆಗೆ ಬೇಕಾಗಿ ಭವ್ಯಗೆ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಲಾಗಿದ್ದು,  ಪತಿ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತು  ಭವ್ಯ ತನ್ನ ಮೂರು ವರ್ಷದ ಮಗುವಿನೊಂದಿಗೆ ನವೆಂಬರ್ 19ರ ಶನಿವಾರ ಹೇಮಾವತಿ ಬಲದಂಡೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಇಬ್ಬರ ಮೃತದೇಹಗಳು ಸೋಮವಾರ ಬೆಳಗ್ಗೆ ಪತ್ತೆಯಾಗಿದ್ದು,  ಹೊಳೆನರಸೀಪುರ ನಗರ ಠಾಣೆಯಲ್ಲಿ  ಭವ್ಯ ಅವರ ಸೋದರಮಾವ ಗುರುಸ್ವಾಮಿ ದೂರು ದಾಖಲಿಸಿದ್ದಾರೆ. 

Similar News