ಶಿರೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ-ಪೋಷಕರಿಗೆ ಶೈಕ್ಷಣಿಕ ಪ್ರೇರಣಾ ಶಿಬಿರ

Update: 2022-11-22 06:11 GMT

ಶಿರೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಡವಿನಕೋಣೆ ಶಿರೂರು ಹಾಗೂ ನಮ್ಮ ನಾಡ ಒಕ್ಕೂಟ (ರಿ) ಬೈಂದೂರು ಘಟಕ ಇವರ ಜಂಟಿ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಡವಿನಕೋಣೆ ಶಿರೂರಿನಲ್ಲಿ ವಿದ್ಯಾರ್ಥಿ-ಪೋಷಕರಿಗೆ ಪ್ರೇರಣಾ ಶಿಬಿರ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಕಚ್ಚಿ ಮಹಮ್ಮದ್ ಮುಸ್ತಾಕ್ ಅವರ ಅಧ್ಯಕ್ಷತೆಯಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.

ಶಿರೂರು ಗ್ರಾ.ಪಂ. ಸದಸ್ಯರಾದ ನೂರ್ ಮಹಮ್ಮದ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ನಾಡ ಒಕ್ಕೂಟ ಬೈಂದೂರು ಘಟಕದ ಉಪಾಧ್ಯಕ್ಷ ಮಾಮ್ಡು ಇಬ್ರಾಹಿಮ್ ಸಾಹೇಬ್, ಸಂಪನ್ಮೂಲ ವ್ಯಕ್ತಿಯಾಗಿ ದೂರದ ಮಂಗಳೂರಿನಿಂದ ಪ್ರೇರಕ ಭಾಷಣಕಾರ ರಫೀಕ್ ಮಾಸ್ಟರ್ ಅವರು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪ್ರತ್ಯೇಕವಾಗಿ ಈ ಕಾರ್ಯಾಗಾರವನ್ನು ನಡೆಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಿರೂರು ಗ್ರಾ.ಪಂ. ಸದಸ್ಯರುಗಳಾದ ಖಲೀಫಾ ಶಾಹೀನ್, ತಾರಿಸಲ್ಲಾ ಮಹಮ್ಮದ್ ಗೌಸ್, ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲೆಯ ಖಜಾಂಚಿಯರಾದ ಸಯ್ಯದ್ ಅಜ್ಮಲ್ ಸಾಹೇಬ್, ಜಿಲ್ಲಾ ಸದಸ್ಯರಾದ ಹುಸೈನ್ ಸಾಹೇಬ್, ತಾಲೂಕು ಸದಸ್ಯರಾದ ಇಲ್ಯಾಸ್ ಸಾಹೇಬ್ ಬೈಂದೂರು, ನಿವೃತ್ತ ಮುಖ್ಯೊಪಾಧ್ಯಾಯರಾದ ಕಾಪ್ಸಿ ಮಹಮ್ಮದ್ ಗೌಸ್, ಗಣೇಶ್ ಸೇವಾ ಸಂಘ ಹಡವಿನಕೋಣೆಯ ಕಾರ್ಯದರ್ಶಿ ಶ್ರೀ ವೆಂಕಪ್ಪ ಮೇಸ್ತ, ಎಸ್.ಡಿ.ಎಮ್.ಸಿ ಯ ಸರ್ವಸದಸ್ಯರು ಶಾಲಾ ಶಿಕ್ಷಕ ವೃಂದದವರು, ಪೋಷಕರು ಮತ್ತು ಶಿಕ್ಷಣಾಭಿಮಾನಿಗಳು ಉಪಸ್ಥಿತರಿದ್ದರು.

ಶಾಲೆಯ ಮುಖ್ಯೊಪಾಧ್ಯಾಯ ಎಸ್. ಆನಂದ ಮೊಗವೀರ ಅತಿಥಿಗಳನ್ನು ಸ್ವಾಗತಿಸಿದರು. ಶಾಲಾ ಅಧ್ಯಾಪಕ ಧರ್ಮನಾಯಕ್ ಕಾರ್ಯಕ್ರಮವನ್ನು ನಿರೂಪಿಸಿದರೆ, ಅಧ್ಯಾಪಕಿ ಪೂರ್ಣಿಮಾರವರು ವಂದಿಸಿದರು.

Similar News