ಸಿಎಂ ಬೊಮ್ಮಾಯಿ ಬೆಂಗಾವಲು ವಾಹನ ಅಪಘಾತ; ಪೊಲೀಸ್ ಸಿಬ್ಬಂದಿಗೆ ಗಾಯ

Update: 2022-11-22 09:41 GMT

ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ವಾಹನವೊಂದು ಪಲ್ಟಿಯಾದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಹಿರಿಯೂರು ಪಟ್ಟಣದ ತಾಲೂಕು ಕಚೇರಿ ಸಮೀಪ ಘಟನೆ ಸಂಭವಿಸಿದೆನ್ನಲಾಗಿದ್ದು, ಅಪಘಾತದಿಂದ ಸಿಇಎನ್ ಸಿಪಿಐ ರಮಾಕಾಂತ್ ಸೇರಿ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಐತಿಹಾಸಿಕ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಭೇಟಿ ನೀಡಿದ್ದು, ವಾಣಿ ವಿಲಾಸ ಡ್ಯಾಂನಿಂದ ಹಿರಿಯೂರಿಗೆ ಬರುವ ವೇಳೆ ಅಪಘಾತ ಸಂಭವಿಸಿದೆನ್ನಲಾಗಿದೆ. 

Similar News