ಕೊರಗರಿಗೆ ಕೃಷಿಭೂಮಿ ಒದಗಿಸುವಂತೆ ಆಗ್ರಹಿಸಿ ಪುತ್ತೂರು ತಾಲೂಕು ಕೊರಗರ ಸಂಘದ ಮನವಿ

Update: 2022-11-22 10:38 GMT

ಪುತ್ತೂರು: ತಾಲೂಕಿನ ಆದಿವಾಸಿ ಬುಡಕಟ್ಟು ಕೊರಗ ಸಮುದಾಯದ ಸಬಲೀಕರಣದ ಹಿನ್ನಲೆಯಲ್ಲಿ ಅವರನ್ನು ಕೃಷಿಯಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಕೊರಗ ಸಮುದಾಯದ ಕುಟುಂಬಗಳಿಗೆ ಕೃಷಿ ಭೂಮಿ ಒದಗಿಸುವಂತೆ ಆಗ್ರಹಿಸಿ ಮಂಗಳವಾರ ಪುತ್ತೂರು ತಾಲೂಕು ಕೊರಗರ ಅಭಿವೃದ್ಧಿ ಸಂಘದ ವತಿಯಿಂದ ಪುತ್ತೂರು ತಹಸೀಲ್ದಾರ್ ಸಿಸರ್ಗಪ್ರಿಯ ಅವರಿಗೆ ಮನವಿ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಕೊರಗ ಅಭಿವೃದ್ಧಿ ಸಂಘದ ಅಧ್ಯಕ್ಷ ಸುರೇಶ್ ಕೊರಗ, ಕಾರ್ಯದರ್ಶಿ ಕಮಲ, ಕೊರಗ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಪುತ್ರನ್ ಹೆಬ್ರಿ, ಕೊರಗ ಸಂಘಗಳ ಜಿಲ್ಲಾ ಸಮಿತಿ ಸದಸ್ಯ ಸಂಜೀವ ಮೂಡಬಿದ್ರೆ, ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಕೊಯ್ಲ, ಕೊರಗ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. 

Similar News