ಕೊಡಚಾದ್ರಿ ಕೇಬಲ್‌ ಕಾರ್ ಯೋಜನೆ ಶೀಘ್ರ ಅನುಷ್ಠಾನ: ಸಂಸದ ಬಿ.ವೈ.ರಾಘವೇಂದ್ರ

Update: 2022-11-22 13:31 GMT

ಉಡುಪಿ: ಕೊಡಚಾದ್ರಿಯ ಸರ್ವಜ್ಞ ಪೀಠದಿಂದ-ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದವರೆಗೆ ಕೇಬಲ್ ಕಾರ್ ಅಳವಡಿಸಿವ ಕಾಮಗಾರಿಗೆ ಕೇಂದ್ರದ ಭೂ ಸಾರಿಗೆ ಮಂತ್ರಾಲಯದ ಎನ್‌ಎಚ್‌ಎಲ್‌ಎಂಎಲ್ ಅಧಿಕಾರಿ ಗಳ ತಂಡವು ಡಿಪಿಆರ್ ಮತ್ತು ಪತನ ನಕ್ಷೆಯನ್ನು ಅಂತಿಮಗೊಳಿಸಲು ಹಾಗೂ ಡಿಪಿಆರ್ ಅನುಮೋದನೆಗೆ ಇರುವ ತೊಡಕುಗಳ ಬಗ್ಗೆ ತಿಳಿಯಲು ನ.18 ರಂದು ಸರ್ವೇ ಕಾರ್ಯ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಕೇಬಲ್ ಕಾರ್ ನಿರ್ಮಾಣಕ್ಕೆ ಇರುವ ಸಮಸ್ಯೆಯ ಕುರಿತು ನ.19ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರೊಂದಿಗೆ ಚರ್ಚಿಸಿದ್ದು, ಕೇಂದ್ರದ ಪರ್ವತ ಮಾಲಾ ಅಡಿಯಲ್ಲಿ ಬರುವ ನೂತನ ಕೇಬಲ್ ಕಾರ್ ಯೋಜನೆಯು ಶೀಘ್ರ ಅಳವಡಿಸುವ ಕಾರ್ಯ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೊಡಚಾದ್ರಿಯಿಂದ ಕೊಲ್ಲೂರಿನವರೆಗೆ ಕೇಬಲ್ ಕಾರ್ ನಿರ್ಮಾಣಕ್ಕೆ ಇರುವ ತೊಡಕುಗಳನ್ನು ಪರಿಹರಿಸಲು ಪ್ರವಾಸೋದ್ಯಮ ಇಲಾಖೆ, ಅರಣ್ಯ ಇಲಾಖೆ, ರಾಷ್ಟೀಯ ಹೆದ್ದಾರಿ ಅಧಿಕಾರಿಗಳ ಜೊತೆಗೆ ಸೇರಿ ಪರಿಹರಿಸಿ, ಕನಿಷ್ಠ ಒಂದು ತಿಂಗಳ ಅವಧಿಯಲ್ಲಿ ಡಿಪಿಆರ್ ಮಂಜೂರಾತಿ ಪಡೆಯುವುದಾಗಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಎನ್‌ಎಚ್‌ಎಲ್‌ಎಂಎಲ್ ದೆಹಲಿಯ ಹಿರಿಯ ಮ್ಯಾನೇಜರ್ ಅನುರಾಗ್ ತ್ರಿಪಾಟಿ, ಬೆಂಗಳೂರು ಮ್ಯಾನೇಜರ್ ರೀನಾ ಪವಾರ್, ರಾಷ್ಟ್ರೀಯ ಹೆದ್ದಾರಿ ಇಲಾಖೆ ಶಿವಮೊಗ್ಗದ ಪೀರ್ ಪಾಷಾ, ಡಿಪಿಆರ್ ಕನ್ಸಲ್ಟೆಂಟ್ ಶ್ರವಣ ಕುಮಾರ್, ಪ್ರವಾಸೋದ್ಯಮ ಇಲಾಖೆಯ ಗುರುಪ್ರಸಾದ್, ವನ್ಯಜೀವಿ ಹಾಗೂ ಅರಣ್ಯ ಇಲಾಖೆಯ ಸಂಪತ್ ಶಾಸ್ತ್ರೀ, ಬೈಂದೂರಿನ ವೆಂಕಟೇಶ್ ಕಿಣಿ, ಶಿವಕುಮಾರ್ ಉಪಸ್ಥಿತರಿದ್ದರು.

Similar News