ಆಧಾರ್ ಕಾರ್ಡ್ ಕಳೆದುಕೊಂಡರೆ ಎಚ್ಚರಿಕೆ ವಹಿಸಿ, ಮಂಗಳೂರು ಸ್ಫೋಟದಿಂದ ಪಾಠ ಕಲಿಯಬೇಕಿದೆ: ಅಲೋಕ್ ಕುಮಾರ್

Update: 2022-11-23 07:08 GMT

ಬೆಂಗಳೂರು, ನ.23: 'ಮಂಗಳೂರು ಸ್ಫೋಟ ಪ್ರಕರಣದಿಂದ ನಾವೆಲ್ಲರೂ ಪಾಠ ಕಲಿಯಬೇಕಿದೆ' ಎಂದು ಎಡಿಜಿಪಿ ಅಲೋಕ್ ಕುಮಾರ್ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, '' ಮಂಗಳೂರು ಸ್ಫೋಟ ಪ್ರಕರಣದಿಂದ ಪಾಠ ಕಲಿಯಬೇಕಿದೆ.  ನಿಮ್ಮ ಆಧಾರ್ ಕಳೆದುಕೊಂಡಾಗ ಎಚ್ಚರಿಕೆ ಇರಲಿ. ಸಾರ್ವಜನಿಕರು ತಮ್ಮ ಗುರುತಿನ ಚೀಟಿ ಬಗ್ಗೆ ಎಚ್ಚರ ವಹಿಸಬೇಕು. ಐಡಿ ಕಾರ್ಡ್ ದುರ್ಬಳಕೆಗೆ ಕಡಿವಾಣ ಹಾಕಿ  ಅಪರಿಚಿತರಿಗೆ ಬಾಡಿಗೆ ಕೊಡುವ  ಮುನ್ನ ಪರಿಶೀಲಿಸಿ, ಮನೆಯ ಸುತ್ತಮುತ್ತ ಏನು ನಡೆಯುತ್ತಿದೆ ಎಂಬುದನ್ನು ಗಮನಿಸುತ್ತಿರಬೇಕು'' ಎಂದು ಸಲಹೆ ನೀಡಿದ್ದಾರೆ. 

ಇದನ್ನೂ ಓದಿ: ಮಂಗಳೂರು | ಆಟೊ ರಿಕ್ಷಾದಲ್ಲಿ ಸ್ಫೋಟ ಪ್ರಕರಣ: ಸ್ಥಳಕ್ಕೆ ಗೃಹಸಚಿವರು ಭೇಟಿ, ಪರಿಶೀಲನೆ

Similar News