ಪ್ರತ್ಯೇಕ ಪ್ರಕರಣ: ಉಡುಪಿ ಜಿಲ್ಲೆಯಲ್ಲಿ ಐದು ಮಂದಿ ಆತ್ಮಹತ್ಯೆ

Update: 2022-11-23 14:26 GMT

ಬ್ರಹ್ಮಾವರ, ನ.23: ವೈಯಕ್ತಿಕ ಕಾರಣದಿಂದ ಮನನೊಂದ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿ ರಾಮ ಪೂಜಾರಿ (54) ಎಂಬವರು ನ.22ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ: ಅನಾರೋಗ್ಯದಿಂದ ಬಳಲುತ್ತಿದ್ದ ಪದ್ಮ ಶೇರಿಗಾರ್ತಿ (85) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.22ರಂದು ರಾತ್ರಿ ವೇಳೆ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ಕಾಯಿಲೆಯಿಂದ ಬಳಲುತ್ತಿದ್ದ ನೀಲಾವರ ಗ್ರಾಮದ ಕೆಲಕುಂಜಾಲು ನಿವಾಸಿ ಗೋಪಾಲ ನಾಯ್ಕ (75) ಎಂಬವರು ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ನ.22.ರಂದು ರಾತ್ರಿ ಚಾಂತಾರು ಗ್ರಾಮದ ಮದಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಂಕರನಾರಾಯಣ: ವೈಯಕ್ತಿಕ ಕಾರಣದಿಂದ ಮನನೊಂದ ವಂಡಾರು ಗ್ರಾಮದ ಹಳ್ಳಿಬೈಲ್ಲು ನಿವಾಸಿ ಪ್ರಶಾಂತ ದೇವಾಡಿಗ (31) ಎಂಬವರು ನ.22ರಂದು ರಾತ್ರಿ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ವಿಪರೀತ ಮದ್ಯ ಸೇವನೆ ಚಟದಿಂದ ಮಾನಸಿಕವಾಗಿ ನೊಂದ ಮುಂಡ್ಕೂರು ಗ್ರಾಮದ ದಡ್ಡುಮನೆಯ ನಿವಾಸಿ ಪ್ರಕಾಶ್ ಪೂಜಾರಿ (44) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.23ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Similar News