ಉಚ್ಚಿಲ: ದೇವಸ್ಥಾನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

Update: 2022-11-23 17:32 GMT

ಪಡುಬಿದ್ರಿ: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿದರು.

ಕಾಪು ಕ್ಷೇತ್ರ ಶಾಸಕ ಲಾಲಾಜಿ ಮೆಂಡನ್ ಜತೆಗೆ ಕ್ಷೇತ್ರಕ್ಕಾಗಮಿಸಿದ ಸಚಿವರನ್ನು ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಜಿ. ಶಂಕರ್ ಸ್ವಾಗತಿಸಿದರು.  ಮಹಿಳೆಯರ ಪೂರ್ಣಕುಂಭ ಸ್ವಾಗತದೊಂದಿಗೆ ಶ್ರೀ ದೇವಸ್ಥಾನಕ್ಕಾಗಮಿಸಿದ ಅವರನ್ನು ಶ್ರೀ ದೇಗುಲದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ವಿಷ್ಣುಮೂರ್ತಿ ಉಪಾಧ್ಯಾಯರು ವೇದಘೋಷ, ಮಂಗಳಾಷ್ಟಕದೊಂದಿಗೆ ಭದ್ರಕಾಳಿ ಸನ್ನಿಧಿ, ಮಹಾಗಣಪತಿ ದೇವರ ದರ್ಶನ ಮಾಡಿಸಿ ಶ್ರೀ ಮಹಾಲಕ್ಷ್ಮೀ ಸನ್ನಿಧಿಗೆ ಕರೆ ತಂದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀ ಕ್ಷೇತ್ರ ಸಂದರ್ಶನದ ತುಡಿತದೊಂದಿಗೆ ಆಕೆಯ ಆಶೀರ್ವಾದವನ್ನು ಪಡೆಯಲು ಬಂದಿರುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ದ.ಕ., ಜಿಲ್ಲಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ದ.ಕ., ಮೊಗವೀರ ಮಹಿಳಾ ಮಹಾಜನ ಸಂಘದ ಉಪಾಧ್ಯಕ್ಷೆ ಜಾನಕಿ ಲೀಲಾಧರ್, ಶ್ರೀ ದೇವಸ್ಥಾನದ ಪ್ರಬಂಧಕ ಸತೀಶ್ ಅಮೀನ್ ಮಟ್ಟು, ನಾರಾಯಣ ಕರ್ಕೇರ, ದಿನೇಶ್ ಎರ್ಮಾಳು, ದಿನೇಶ್ ಮೂಳೂರು, ಮೋಹನ್ ಬಂಗೇರ, ಕಾಪು ಬಿಜೆಪಿ ಮಂಡಲಾಧ್ಯಕ್ಷ ಶ್ರೀಕಾಂತ ನಾಯಕ್, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮಟ್ಟು ಮತ್ತಿತರರು ಸಚಿವರ ಜತೆಗಿದ್ದರು.

Similar News