ಮಂಗಳೂರು: ಕೆನರಾ ಪದವಿ ಪೂರ್ವ ಕಾಲೇಜಿಗೆ ಸುವರ್ಣ ಮಹೋತ್ಸವ ಸಂಭ್ರಮ

Update: 2022-11-23 17:40 GMT

ಮಂಗಳೂರು: ಕೆನರಾ ಪದವಿಪೂರ್ವ ಕಾಲೇಜು ಈ ವರ್ಷ ಸುವರ್ಣ ಮಹೋತ್ಸವ ವನ್ನು ಆಚರಿಸಿಕೊಳ್ಳುತ್ತಿದೆ. ಇದರ ಅಂಗ ವಾಗಿ ಕಾಲೇಜಿನಲ್ಲಿ ವಿವಿಧ  ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಈಗಾಗಲೇ ವರ್ಷವಿಡಿ ಹಲವಾರು ವೆಬಿನಾರ್ ಗಳು, ಸ್ವರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು,ರಂಗ ಚಟುವಟಿಕೆಗಳು, ಸುವರ್ಣ ಮಹೋತ್ಸವ ಲಾಂಛನ ಬಿಡುಗಡೆ, ಸುವರ್ಣ ಮಹೋತ್ಸವ ಗೀತೆ ಬಿಡುಗಡೆ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯಿತು.

ಈ ಪ್ರಯುಕ್ತ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು, ಹಳೆ ವಿದ್ಯಾರ್ಥಿಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ, ಹಳೆ ವಿದ್ಯಾರ್ಥಿನಿಯದ ಹೊನಲು ಬೆಳಕಿನ ಮ್ಯಾಟ್ ತ್ರೋಬಾಲ್, ಅಂತರ ಕಾಲೇಜು ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟಗಳು ನಡೆಯಿತು. ವಿಕಾಸ್ ಕಾಲೇಜು ಕೆನರಾ ಶಿಕ್ಷಣ ಸಂಸ್ಥೆ ಗಳ ಜೊತೆ ಈ ಸಂದರ್ಭದಲ್ಲಿ ಸಂಯೋಜನೆ ಗೊಂಡು ಕೆನರಾ ಸಮೂಹ ಶಿಕ್ಷಣ ಸಂಸ್ಥೆ ಗಳು ಸುವರ್ಣ ಮಹೋತ್ಸವ ಆಚರಿಸುತ್ತಿದೆ ಎಂದು ಕೆನರಾ ಪದವಿ ಪೂರ್ವ ಕಾಲೇಜಿನ ಸಂಚಾಲಕ ಗೋಪಾಲ ಕೃಷ್ಣ ಶೆಣೈ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಕೆನರಾ ಹೈ ಸ್ಕೂಲ್ ಅಸೋಸಿಯೇಷನ್ ನಡೆಸಿದ ಈ ಎಲ್ಲಾ ಸ್ಪರ್ಧೆ ಮತ್ತು ಪಂದ್ಯಾಟಗಳಲ್ಲಿ ಕೆನರಾ ಸೋದರ ಸಂಸ್ಥೆಯ ಎಲ್ಲಾ ಸಹೋದ್ಯೋಗಿಗಳು ಭಾಗವಹಿಸಿ ಸುವರ್ಣ ಮಹೋತ್ಸವ ಸಂಭ್ರಮದ ಸಂತೋಷದಲ್ಲಿ ಪಾಲ್ಗೊಂಡರು. ನವೆಂಬರ್ 25, ನ.26 ರಂದು ರಾಜ್ಯಮಟ್ಟದ ಕಾರ್ಯಕ್ರಮದ ಆಯೋಜನೆಯಾಗಿದೆ.

ಹೈಸ್ಕೂಲ್ ಮತ್ತು ಪಿಯು ವಿದ್ಯಾರ್ಥಿಗಳಿಗಾಗಿ "ಫೂಟ್ ಫ್ರೀಂಟ್  -2022" ರಾಜ್ಯಮಟ್ಟದಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾ ಗಿದೆ. ಈ ಸ್ಪರ್ಧೆಯಲ್ಲಿ ಜಿಲ್ಲೆಯ ಮತ್ತು ಹೊರ ಜಿಲ್ಲೆಗಳ ಅನೇಕ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಈ ಸ್ಪರ್ಧೆಗಳಿಗೆ ಬೇರೆಬೇರೆ, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹೆಸರು ನೋಂದಾವಣೆ ಮಾಡಿಕೊಂಡಿದ್ದು ಒಂದು ಸಾವಿರಕ್ಕಿಂತಲೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು 27 ವಿವಿಧ ಸ್ಪರ್ಧೆಗಳಲ್ಲಿ ಎರಡು ದಿವಸಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಸುವರ್ಣ ಮಹೋತ್ಸವ ಸಂಭ್ರಮದ ಕಾರ್ಯಕ್ರಮವು ನ. 27 .2022 ರಂದು ಕಾಲೇಜಿನಲ್ಲಿ ನಡೆಯಲಿದೆ. ಈ ದಿನದ ಕಾರ್ಯಕ್ರಮದಲ್ಲಿ ಮಾಹೆ ವಿಶ್ವವಿ ದ್ಯಾನಿಲಯದ ಆರೋಗ್ಯ ವಿಜ್ಞಾನ ವಿಭಾಗದ ಉಪಕುಲಪತಿ ಗಳಾಗಿರುವ ಡಾ. ಎಂ. ವೆಂಕಟ್ರಾಯ ಪ್ರಭು (ಎಂ, ಡಿ) ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಕಾಲೇಜಿನ ಹಳೆಯ ವಿದ್ಯಾರ್ಥಿಗಳು, ದಾನಿಗಳು, ಹಿತೈಷಿಗಳು, ವಿದ್ಯಾರ್ಥಿಗಳ ಪೋಷಕರು ಪಾಲ್ಗೊಳ್ಳಲಿದ್ದಾರೆ.

ಕಾಲೇಜಿನಲ್ಲಿ ಪೂರ್ಣ ಪ್ರಮಾಣದ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಪ್ರಾಂಶುಪಾಲರುಗಳಿಗೆ, ಉಪನ್ಯಾಸಕ ರುಗಳಿಗೆ, ಕಚೇರಿ ಸಿಬ್ಬಂದಿಗಳಿಗೆ, ರಾಂಕ್ ಪಡೆದ ವಿದ್ಯಾರ್ಥಿಗಳಿಗೆ ಮತ್ತು ರಾಷ್ಟ್ರಮಟ್ಟದಲ್ಲಿ ಕ್ರೀಡೆಯಲ್ಲಿ ಮಿಂಚಿದ ಕಾಲೇಜಿನ ಹಳೆಯ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅದೇ ದಿನ ಹಳೆ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಉಪನ್ಯಾಸಕರು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಡ ಲಿದ್ದಾರೆ ಎಂದು ಗೋಪಾಲ ಕೃಷ್ಣ ಶೆಣೈ  ತಿಳಿಸಿದ್ದಾರೆ.

ನ 28 ರಂದು ಕಾಲೇಜಿನ ವಾರ್ಷಿ ಕೋತ್ಸವ ನಡೆಯಲಿದೆ, ಈ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಡಾ. ಕೆ. ಸುಬ್ರಹ್ಮಣ್ಯಂ(ಎಂ. ಡಿ ) ಪ್ರೊಫೆಸರ್ ಮತ್ತು ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥರು ಶ್ರೀನಿವಾಸ್‌ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮತ್ತು ರಿಸರ್ಚ್ ಸೆಂಟರ್ ಮುಕ್ಕ ಮಂಗಳೂರು ಇವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.  ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಗಳು ನಡೆಯಲಿವೆ ಎಂದು 'ಫೂಟ್ ಫ್ರಿಂಟ್ -2022 ಕಾರ್ಯಕ್ರಮದ ಸಂಚಾಲಕಿ ಸುಜಾತಾ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕೆನರಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲತಾ ಮಹೇಶ್ವರಿ ಕೆ.ಬಿ, ಡೀನ್ ಗೋಪಾಲ ಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. 

Similar News