ಉದ್ಯಾವರ: ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ

Update: 2022-11-24 14:10 GMT

ಉಡುಪಿ:  ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ನೆಹರೂ ಜಯಂತಿಯ ಪ್ರಯುಕ್ತ ಆಚರಿಸಲ್ಪಡುವ ಮಕ್ಕಳ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ರಸಪ್ರಶ್ನೆ ಸ್ಪರ್ಧೆ ಶುಕ್ರವಾರ ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ತರ ಸುವರ್ಣ ಸಂಭ್ರಮ ಸಭಾಭವನದಲ್ಲಿ  ನಡೆಯಲಿದೆ.

ಶುಕ್ರವಾರ ಬೆಳಗ್ಗೆ 9.15ಕ್ಕೆ ರಸಪ್ರಶ್ನೆ ಕಾರ್ಯಕ್ರಮವನ್ನು ಝೀ ಟಿವಿಯ ಡ್ರಾಮ ಜೂನಿಯರ್ ಸೀಸನ್ - 4ರ ವಿಜೇತೆ ಸಮೃದ್ಧಿ ಕುಂದಾಪುರ ಉದ್ಘಾಟಿಸಲಿದ್ದು,  ಅಧ್ಯಕ್ಷತೆಯನ್ನು ಮಾಜಿ ಸಚಿವ ವಿನಯಕುಮಾರ ಸೊರಕೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಕೊಪ್ಪದ ನ್ಯಾಯವಾದಿಗಳೂ, ಸಾಮಾಜಿಕ ಕಾರ್ಯಕರ್ತ ರಾದ ಸುಧೀರ್ ಕುಮಾರ್ ಮರೊಳಿ ಮತ್ತು ಹಿಂದೂ ಶಾಲಾ ಸಂಚಾಲಕರಾದ ಸುರೇಶ್  ಶೆಣೈ ಉಪಸ್ಥಿತರಿರುವರು. 

ಅಪರಾಹ್ನ 3.30ಕ್ಕೆ ಜರಗುವ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ಎಚ್.ಎಸ್. ಅಡಿಟೋರಿಯಂ ಟ್ರಸ್ಟ್‌ನ ಆಡಳಿತ ವಿಶ್ವಸ್ಥರಾದ ಅಬ್ದುಲ್ ಜಲೀಲ್ ಸಾಹೇಬ್ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಪ್ರಸಾದ್‌ ರಾಜ್ ಕಾಂಚನ್, ಉಡುಪಿ ಶೇಖ್ ವಾಹಿದ್ ಮತ್ತು ಹಿಂದೂ ಶಾಲಾ ಮುಖ್ಯೋಪಾಧ್ಯಾಯಿನಿ ಹೇಮಲತಾ ಪಾಲ್ಗೊಳ್ಳುವರು ಎಂದು ಸಂಸ್ಥೆ ಅಧ್ಯಕ್ಷ  ರಿಯಾಝ್ ಪಳ್ಳಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Similar News