ಬೆಂಗಳೂರು : ಚಿನ್ನಾಭರಣ ಕಳವು ಪ್ರಕರಣ; ಸೊತ್ತು ಸಹಿತ ಆರೋಪಿ ಸೆರೆ

Update: 2022-11-25 03:20 GMT

ಬೆಂಗಳೂರು : ಹಗಲು ವೇಳೆ ಬೀಗ ಹಾಕಿರುವ ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಾಗಡಿರೋಡ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಂಗಳೂರಿನ ರಾಜಾಜಿನಗರ ನಿವಾಸಿ ಮಂಜುನಾಥ (40) ಎಂದು ಗುರುತಿಸಲಾಗಿದ್ದು, ಒಟ್ಟು 6,20,000ರೂ. ಬೆಲೆ ಬಾಳುವ 115 ಗ್ರಾಂ ತೂಕದ ಚಿನ್ನದ ವಡವೆಗಳು, 30 ಗ್ರಾಂ ತೂಕದ ಬೆಳ್ಳಿಯ ಕಾಲು ಚೈನು, ಒಂದು ಐಪೋನ್‌ ಹಾಗು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈತನ ವಿರುದ್ದ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ, ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ, ಆಡುಗೋಡಿ ಪೊಲೀಸ್ ಠಾಣೆ, ಕಲಾಸಿಪಾಳ್ಯ ಪೊಲೀಸ್ ಠಾಣೆ, ಚಾಮರಾಜಪೇಟೆ ಪೊಲೀಸ್ ಠಾಣೆ, ಶ್ರೀರಾಮಪುರ ಪೊಲೀಸ್ ಠಾಣೆ, ಬಾಣಸವಾಡಿ ಪೊಲೀಸ್ ಠಾಣೆ, ಜೆ.ಪಿ ನಗರ ಪೊಲೀಸ್ ಠಾಣೆ, ಕೊಡಿಗೆಹಳ್ಳಿ ಪೊಲೀಸ್ ಠಾಣೆ, ಹುಳಿಮಾವು ಪೊಲೀಸ್ ಠಾಣೆ, ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

Similar News