ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಿಲ್ಲ: ಕೆಪಿಸಿಸಿ ಸ್ಪಷ್ಟನೆ

Update: 2022-11-25 16:21 GMT

ಮಂಗಳೂರು, ನ.25: ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯದ 5 ಜಿಲ್ಲೆಗಳ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿದೆ. ಆದರೆ ಅದರಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರನ್ನೂ ಬದಲಾವಣೆ ಮಾಡಲಾಗಿದೆ ಎಂದು ಎಡಿಟ್ ಮಾಡಿ ತಪ್ಪು ಸಂದೇಶ ರವಾನಿಸಲಾಗಿದೆ. ಹೈಕಮಾಂಡ್ ಆದೇಶವನ್ನು ಎಡಿಟ್ ಮಾಡಿ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸುವವರ ವಿರುದ್ಧ ತನಿಖೆಗೊಳಪಡಿಸಲಾಗುವುದು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News