‘ಗಡಿ ಹಾಗೂ ನದಿಗಳ ರಕ್ಷಣಾ ಆಯೋಗ’ದ ಅಧ್ಯಕ್ಷರಾಗಿ ನ್ಯಾ.ಶಿವರಾಜ್ ಪಾಟೀಲ್ ನೇಮಕ

Update: 2022-11-25 17:28 GMT

ಬೆಂಗಳೂರು, ನ. 25: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ‘ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗ’ದ ಅಧ್ಯಕ್ಷರನ್ನಾಗಿ ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸರಕಾರದ ಜಂಟಿ ಕಾರ್ಯದರ್ಶಿ ಜಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ ಎಲ್‌ ಮಂಜುನಾಥ್‌ ಅವರು ಈಚೆಗೆ ತೀರಿಕೊಂಡ ಹಿನ್ನೆಲೆಯಲ್ಲಿ ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರ ಸ್ಥಾನ ಖಾಲಿಯಾಗಿತ್ತು.

Similar News