ಕಡೂರು | ವಿದ್ಯಾರ್ಥಿನಿಯರಿಗೆ ಕಿರುಕುಳ: ಆರೋಪಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

Update: 2022-11-26 06:47 GMT

ಚಿಕ್ಕಮಗಳೂರು, ನ.26: ಶಾಲಾ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದನೆನ್ನಲಾದ ಆರೋಪಿ ಕ್ಯಾಬ್ ಚಾಲಕನನ್ನು ಗ್ರಾಮಸ್ಥರು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಡೂರು ತಾಲೂಕಿನ ಜಿಲ್ಲೆಯ ಸಕ್ಕರಾಯಪಟ್ಟಣ ಸಮೀಪ ಸಿದ್ದರಹಳ್ಳಿಯಲ್ಲಿ ಎಂಬಲ್ಲಿ ನಡೆದಿದೆ. ಈ ನಡುವೆ ಆರೋಪಿಗೆ ಗ್ರಾಮಸ್ಥರು ಥಳಿಸುತ್ತಿರುವ ವೀಡಿಯೊ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗಿದೆ.

ಕ್ಯಾಬ್ ಚಾಲಕ ರಾಜಪ್ಪ ಆರೋಪಿಯಾಗಿದ್ದು, ಈತನನ್ನು ಬಂಧಿಸಿರುವ ಸಖರಾಯಪಟ್ಣಣ ಠಾಣಾ ಪೊಲೀಸರು ಪೊಕ್ಸೊ ಪ್ರಕರಣ ದಾಖಲಿಸಿದ್ದಾರೆ.

ಕ್ಯಾಬ್ ನಲ್ಲಿ ಕಡೂರಿನಿಂದ ಸಿದ್ದರಹಳ್ಳಿಗೆ ಶಿಕ್ಷಕಿಯರನ್ನ ಕರೆತರುತ್ತಿದ್ದ ಆರೋಪಿ ರಾಜಪ್ಪ, ಬಳಿಕ ದಿನವಿಡೀ ಶಾಲೆಯ ಪರಿಸರದಲ್ಲೇ ಉಳಿದುಕೊಂಡು ವಿದ್ಯಾರ್ಥಿನಿಯರ ಶೌಚಾಲಯದ ಬಳಿ ತೆರಳಿ ದೇಹ ಸ್ಪರ್ಶಿಸಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಹಿಡಿದ ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

Similar News