ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 2 ಲಕ್ಷ ಕೋಟಿ ರೂ.ಬಂಡವಾಳ ಹೂಡಿಕೆ: ಮುಖ್ಯಮಂತ್ರಿ ಬೊಮ್ಮಾಯಿ

Update: 2022-11-26 16:15 GMT

ಬೆಂಗಳೂರು, ನ. 26: ಕರ್ನಾಟಕದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 2 ಲಕ್ಷ ಕೋಟಿ ರೂ. ಗಳ ಬಂಡವಾಳ ಹೂಡಿಕೆಯಾಗಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಶನಿವಾರ ಏಟ್ರಿಯಾ ವಿಶ್ವವಿದ್ಯಾಲಯ ಹಾಗೂ ಗ್ರೀನ್ ಫ್ಯೂಚರ್ ಸಮ್ಮಿಟ್ ಕಾರ್ಯಕ್ರಮವನ್ನು ಉದ್ಘಾಟಿಸಿ   ಉದ್ಯಮಿಗಳೊಂದಿಗೆ ಸಂವಾದ ನಡೆಸಿದ ಅವರು, ಮುಂದಿನ ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ಪರ್ಯಾಯವಾಗಿ ನವೀಕರಣ ಇಂಧನ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗಲಿದೆ. ಪ್ರಮುಖವಾಗಿ ಹೈಡ್ರೊಜನ್ ಉದ್ಯಮದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಯಾಗಲಿದ್ದು, ಕಡಿಮೆ ದರದಲ್ಲಿ ಇಂಧನ ದೊರೆಯುವಂತೆ ಮಾಡಲು ಸಾಕಷ್ಟ ಸಂಶೋಧನೆ ನಡೆಯುತ್ತಿದೆ ಎಂದರು.

ಮುಂದಿನ ಐದು ವರ್ಷಗಳಲ್ಲಿ ನಗರಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಾಗಲಿದ್ದು, ಎಲೆಕ್ಟಿಕ್ ವಾಹನಗಳ ದರವೂ ಕಡಿಮೆಯಾಗಲಿದೆ ಎಂದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು  ಜಾರಿಗೊಳಿಸಲು ಖಾಸಗಿಯವರ ಪಾತ್ರವೂ ದೊಡ್ಡದಿದೆ. ಶಿಕ್ಷಣ ಸಂಸ್ಥೆಗಳು ಸರಕಾರದೊಂದಿಗೆ ಸಹಯೋಗ ಮಾಡಿಕೊಂಡು ಕಾರ್ಯನಿರ್ವಹಿಸಬಹುದು ಎಂದು ತಿಳಿಸಿದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಏಟ್ರಿಯಾ ಗುಂಪಿನ ಅಧ್ಯಕ್ಷ ಸಿ.ಎಸ್.ಸುಂದರರಾಜು ಉಪಸ್ಥಿತರಿದ್ದರು.

Similar News