ಎಲೆ ಚುಕ್ಕಿ ರೋಗ | ಮುನ್ನೆಚ್ಚರಿಕಾ ಕ್ರಮಕ್ಕೆ 10 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ

Update: 2022-11-27 07:24 GMT

ಕೊಪ್ಪ, ನ.27:  ಅಡಿಕೆ ಬೆಳೆಗೆ ತಗಲಿರುವ ಎಲೆ ಚುಕ್ಕಿ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು 10 ಕೋಟಿ ರೂ. ಬಿಡುಗಡೆ ಮಾಡಿದ್ದು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ನಾಲ್ಕೂ ಜಿಲ್ಲೆಗಳಿಗೆ ಈ ಮೊತ್ತವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು  ಹರಿಹರಪುರ ಹೆಲಿಪ್ಯಾಡ್‍ ನಲ್ಲಿ ಜನಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಸರಕಾರ ವಿಶ್ವವಿದ್ಯಾಲಯದ ತಂಡವನ್ನು ಕಳಿಸಿ ಅಧ್ಯಯನ ಕೈಗೊಂಡಿದೆ. ಕೇಂದ್ರ ಸರಕಾರದ  ತಜ್ಞರು ಕೂಡ  ಚಿಕ್ಕಮಗಳೂರಿಗೆ  ಬಂದು ಅಧ್ಯಯನ ಮಾಡಿದ್ದಾರೆ. ನಿರಂತರವಾಗಿ ಮಳೆ ಹಾಗೂ ಗಾಳಿಯಿಂದ ಎಲೆ ಚುಕ್ಕಿ ರೋಗ ಹರಡುತ್ತಿದೆ. ಅದಕ್ಕಾಗಿ  ಫಂಗಸ್ ನಿವಾರಣೆಗೆ ಔಷಧಿ ಸಿಂಪಡನೆ ಮಾಡಲಾಗುವುದು. ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ವಿಜ್ಞಾನಿಗಳು ಶಿಫಾರಸು ಮಾಡುವ ಕ್ರಮಗಳನ್ನು ಕೂಡಲೇ ಕೈಗೊಳ್ಳಲಾಗುವುದು  ಎಂದರು.

ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಈಗಾಗಲೇ ಮಾತನಾಡಿ ಎಲ್ಲಾ ರೀತಿಯ ರಕ್ಷಣೆ ನೀಡಲು ಹಾಗೂ ತನಿಖೆ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.

Similar News