ಭಟ್ಕಳ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷರಾಗಿ ಶಿರಾಲಿ ವೆಂಕಟೇಶ್ ನಾಯ್ಕ ನೇಮಕ

Update: 2022-11-27 10:28 GMT

ಭಟ್ಕಳ, ನ.27: ಭಟ್ಕಳ ಬ್ಲಾಕ್‌ ಕಾಂಗ್ರೆಸ್ ನೂತನ ಅಧ್ಯಕರಾಗಿ ಶಿರಾಲಿ ಪಂಚಾಯತ್ ಮಾಜಿ ಅಧ್ಯಕ್ಷ ವೆಂಕಟೇಶ್ ನಾರಾಯಣ ನಾಯ್ಕ ನೇಮಕಗೊಂಡಿದ್ದಾರೆ.

ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇಮಕಾತಿ ಪತ್ರ ಬಿಡುಗಡೆಗೊಳಿಸಿದ್ದಾರೆ. ಕೂಡಲೇ ಪ್ರಮಾಣ ವಚನ ಸ್ವೀಕರಿಸಿ ಕ್ಷೇತ್ರದಲ್ಲಿ ಸ್ಥಳೀಯ ಮಟ್ಟದ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷವನ್ನು ಬಲಪಡಿಸುವಲ್ಲಿ ಸಕ್ರಿಯರಾಗುವಂತೆ ಸೂಚಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Similar News