ಕದ್ರಿ ದೇವಸ್ಥಾನಕ್ಕೆ ಭದ್ರತೆ: ಪೂರ್ವಭಾವಿ ಸಭೆ

Update: 2022-11-27 14:54 GMT

ಮಂಗಳೂರು: ನಗರದ ಕದ್ರಿ ದೇವಸ್ಥಾನದ ಮೇಲೆ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿಯ  ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭದ್ರತಾ ವ್ಯವಸ್ಥೆಗಳನ್ನು ಅಳವಡಿಸುವ ಸಲುವಾಗಿ ರವಿವಾರ ಪೂರ್ವ ಭಾವಿ ಸಭೆ ನಡೆದಿದೆ.

ಶಾಸಕ ವೇದವ್ಯಾಸ ಕಾಮತ್‌ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು.

ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಒಂದೇ ದ್ವಾರದಲ್ಲಿ ಪ್ರವೇಶಕ್ಕೆ ಅವಕಾಶ ನೀಡುವುದು, ಲೋಹ ಪರಿಶೋಧಕ ಯಂತ್ರ, ಬ್ಯಾಗ್‌ಗಳ ಸ್ಕ್ರೀನಿಂಗ್ ಯಂತ್ರ ಅಳವಡಿಸುವುದು, ಪಾರ್ಕಿಂಗ್ ಸ್ಥಳದಲ್ಲಿಯೂ ಸುರಕ್ಷತೆಗೆ ಪೂರಕ ವ್ಯವಸ್ಥೆ ಕಲ್ಪಿಸುವ ಬಗ್ಗೆ ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದರು.

ಸಭೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ ಎ.ಜೆ.ಶೆಟ್ಟಿ, ದೇವಳದ ಕಾರ್ಯನಿವಾಹಣಾಧಿ ಕಾರಿ  ಪಿ.ಜಯಮ್ಮ, ಟ್ರಸ್ಟಿಗಳು ಮತ್ತಿತರರು ಪಾಲ್ಗೊಂಡಿದ್ದರು.

Similar News