ಅಸ್ಸಾಂ: ರ‍್ಯಾಗಿಂಗ್‌ ನಿಂದ ಪಾರಾಗಲು ಹಾಸ್ಟೆಲ್‌ನ 2ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿ

ಐವರು ಆರೋಪಿಗಳ ಬಂಧನ

Update: 2022-11-28 10:55 GMT

ಗುವಾಹಟಿ: ವಾಣಿಜ್ಯ ವಿಭಾಗದ ಜೂನಿಯರ್ ವಿದ್ಯಾರ್ಥಿ ಆನಂದ್ ಶರ್ಮಾ, ವಿಶ್ವವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳ  ರ್ಯಾಗಿಂಗ್ ನಿಂದ  ಪಾರಾಗಲು ಹಾಸ್ಟೆಲ್‌ನ ಎರಡನೇ ಮಹಡಿಯಿಂದ ಜಿಗಿದ ಘಟನೆ ವರದಿಯಾಗಿದ್ದು  ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿಗಾದಲ್ಲಿ ಇರಿಸಲಾಗಿದೆ. ವಿದ್ಯಾರ್ಥಿಯ ಕುಟುಂಬದವರ ದೂರಿನ ಮೇರೆಗೆ ದಿಬ್ರುಗಢ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಓರ್ವ ಮಾಜಿ ಹಾಗೂ ನಾಲ್ವರು ಹಾಲಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರ್ಯಾಗಿಂಗ್ ಬೇಡ ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ.

ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಅವರು, "ದಿಬ್ರುಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ರ್ಯಾಗಿಂಗ್ ಆರೋಪದ ಪ್ರಕರಣದಲ್ಲಿ ಗಾಯಗೊಂಡಿರುವುದು ಗಮನಕ್ಕೆ ಬಂದಿದೆ. ತೀವ್ರ ನಿಗಾ ವಹಿಸಲಾಗಿದೆ ಮತ್ತು ಜಿಲ್ಲಾ ಆಡಳಿತದೊಂದಿಗೆ ಸಮನ್ವಯ ಸಾಧಿಸಿ ಮುಂದಿನ ಕ್ರಮವನ್ನುಕೈಗೊಳ್ಳಲಾಗುವುದು.  ಆರೋಪಿಯನ್ನು ಸೆರೆ ಹಿಡಿಯುವ ಪ್ರಯತ್ನಗಳು  ನಡೆಯುತ್ತಿದ್ದು ಸಂತ್ರಸ್ತನ  ವೈದ್ಯಕೀಯ ಆರೈಕೆಯನ್ನು ನೀಡಲಾಗುತ್ತಿದೆ" ಎಂದರು.

Similar News