ಟೆಂಪೋ- ಬೈಕ್ ಢಿಕ್ಕಿ: ಸವಾರ ಮೃತ್ಯು

Update: 2022-11-28 15:02 GMT

ಹಿರಿಯಡ್ಕ : ಟೆಂಪೊವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನ.28ರಂದು ಬೆಳಗ್ಗೆ ಕುಕ್ಕೆಹಳ್ಳಿ ಎಂಬಲ್ಲಿ ನಡೆದಿದೆ.

ಮೃತರನ್ನು ಬೆಳ್ಳಂಪಳ್ಳಿಯ ವಾಸುದೇವ ಆಚಾರ್ಯ ಎಂಬವರ ಮಗ ರಾಜೇಶ್ ಆಚಾರ್ಯ ಎಂದು ಗುರುತಿಸಲಾಗಿದೆ. ಆತ್ರಾಡಿ-ಕುಕ್ಕೆಹಳ್ಳಿ ರಸ್ತೆ ಕಡೆಯಿಂದ ಕುಕ್ಕಿಕಟ್ಟೆ ಕಡೆಗೆ ಹೋಗುತ್ತಿದ್ದ ಟೆಂಪೊ, ಎದುರಿನಿಂದ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ರಾಜೇಶ್ ಬೈಕ್ ಸಮೇತ ರಸ್ತೆಗೆ ಬಿದ್ದರೆನ್ನಲಾಗಿದೆ. ಈ ವೇಳೆ ಟೆಂಪೊದ ಚಕ್ರ ಹರಿದು ರಾಜೇಶ್ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News