ಕರ್ನಾಟಕ ಜಾನಪದ ವಿವಿಯಿಂದ ಜೀವನ್‌ರಾಂ ಸುಳ್ಯರಿಗೆ ಗೌರವ ಡಾಕ್ಟರೇಟ್

Update: 2022-11-28 15:43 GMT

ಉಡುಪಿ:  ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ನೀಡುವ 2022ನೇ ಸಾಲಿನ  ಗೌರವ ಡಾಕ್ಟರೇಟ್ ಪದವಿಗೆ ಪ್ರಸಿದ್ಧ ರಂಗಕರ್ಮಿ ಜೀವನ್ ರಾಂ ಸುಳ್ಯ ಆಯ್ಕೆ ಆಗಿದ್ದಾರೆ.

ಜೀವನ್‌ರಾಂ  ಅವರು, ರಂಗಭೂಮಿ, ಜಾನಪದ, ಯಕ್ಷಗಾನ, ಸಂಗೀತ, ಕಲೆ, ಜಾದೂ, ಚಲನಚಿತ್ರ ಹಾಗೂ ಸಂಘಟನೆ ಮುಂತಾಗಿ ಸಾಂಸ್ಕೃತಿಕ ಲೋಕದಲ್ಲಿ ಮಾಡಿದ ಗಣನೀಯ ಸಾಧನೆಯನ್ನು ಗುರುತಿಸಿ ಜಾನಪದ ವಿಶ್ವವಿದ್ಯಾಲಯ ಇವರನ್ನು ಈ ಗೌರವಕ್ಕೆ ಆಯ್ಕೆ ಮಾಡಿದೆ.

ಡಿ.1ರಂದು ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಕರ್ನಾಟಕ ಜಾನಪದ ವಿವಿಯ ಆರನೇ ಘಟಿಕೋತ್ಸವದ ಸಂದರ್ಭ ದಲ್ಲಿ ಜೀವನ್‌ರಾಂ ಅವರಿಗೆ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪದವಿ ಪ್ರದಾನ ಮಾಡಲಿ ದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್‌ನಾರಾಯಣ್ ಸಿ.ಎನ್. ಉಪಸ್ಥಿತರಿರುವರು ಎಂದು ಜಾನಪದ ವಿವಿಯ ಕುಲಪತಿ ಪ್ರೊ.ಟಿ.ಎಂ.ಭಾಸ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Similar News