BMTC ಬಸ್ ಢಿಕ್ಕಿ: ಇಬ್ಬರು ಬೈಕ್ ಸವಾರರು ಮೃತ್ಯು

Update: 2022-11-29 16:10 GMT

ಬೆಂಗಳೂರು, ನ. 29: ಬಿಎಂಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಬೆಂಗಳೂರು ಹೊರವಲಯದ ನೈಸ್ ರಸ್ತೆ ಜಂಕ್ಷನ್‍ನಲ್ಲಿ ಈ ಘಟನೆ ಸಂಭವಿಸಿದ್ದು, ಮೃತ ಬೈಕ್ ಸವಾರರನ್ನು ಮಂಜುನಾಥ್ ಮತ್ತು ಶಿವರಾಜ್ ಎಂದು ಗುರುತಿಸಲಾಗಿದೆ.

ಮೃತರು ರಾಮನಗರ ಜಿಲ್ಲೆಯ ಗೊಲ್ಲರಹಟ್ಟಿ ನಿವಾಸಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ತಾವರೆಕೆರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Similar News