ರಾಜ್ಯದ ಕರಡಿಧಾಮಗಳ ಸುತ್ತಮುತ್ತಲಿನ ಪ್ರದೇಶ ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಬೊಮ್ಮಾಯಿ ಮನವಿ

Update: 2022-11-29 17:56 GMT

ಹೊಸದಿಲ್ಲಿ, ನ.29: ರಾಜ್ಯದ ಬಳ್ಳಾರಿ ಜಿಲ್ಲೆಯ ಗುಡೆಕೋಟೆ ಸ್ಲಾತ್ ಕರಡಿಧಾಮ ಹಾಗೂ ಭೀಮಾಗಡ್ ಅಭಯಾರಣ್ಯಗಳ ಸುತ್ತಮುತ್ತಲಿನ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಮಂಗಳವಾರ ಹೊಸದಿಲ್ಲಿಯಲ್ಲಿ ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ, ಈಗಾಗಲೇ ಕರಡು ಅಧಿಸೂಚನೆಯನ್ನು ರಾಜ್ಯ ಸಚಿವ ಸಂಪುಟ ಸಭೆ ಅನುಮೋದಿಸಿದ್ದು, ಕೇಂದ್ರ ಸರಕಾರಕ್ಕೆ ಪ್ರಸ್ತಾವನೆಯನ್ನು ಶಿಫಾರಸ್ಸು ಮಾಡಿ ಸಲ್ಲಿಸಿರುವುದಾಗಿ ತಿಳಿಸಿದರು.

Similar News