ಬೆಂಗಳೂರು: ನೇಪಾಳ ಮೂಲದ ಯುವತಿಯ ಕೊಲೆ

Update: 2022-11-30 11:39 GMT

ಬೆಂಗಳೂರು, ನ.30: ಯುವತಿಯೋರ್ವಳನ್ನು ಹತ್ಯೆಗೈದಿರುವ ಘಟನೆ ನಗರದ ರಾಮಮೂರ್ತಿ ನಗರದಲ್ಲಿ ವರದಿಯಾಗಿದೆ. 

ನೇಪಾಳ ಮೂಲದ ಕೃಷ್ಣಕುಮಾರಿ ಎಂಬಾಕೆಯನ್ನು ಸಂತೋಷ್ ದಾಮಿ (27) ಕೊಲೆಗೈದ ಆರೋಪಿಯಾಗಿದ್ದಾನೆ ಎಂದು ಡಿಸಿಪಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.

ಹೊರಮಾವು ಯೂನಿಸೆಕ್ಸ್ ಸ್ಪಾದಲ್ಲಿ ಬ್ಯೂಟಿಷಿಯನ್ ಆಗಿದ್ದ ಕೃಷ್ಣಕುಮಾರಿ, ಟಿಸಿಪಾಳ್ಯದಲ್ಲಿ ಬಾರ್ಬರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಸಂತೋಷ್ ದಾಮಿ ಇಬ್ಬರಿಗೂ ಪರಿಚಯವಾಗಿ ರಾಮೂರ್ತಿನಗರದ ಟಿಸಿಪಾಳ್ಯದಲ್ಲಿ ಒಂದೇ ಮನೆಯಲ್ಲಿ ಸಹಜೀವನ ನಡೆಸುತ್ತಿದ್ದರು ಎನ್ನಲಾಗಿದೆ.

ಮನೆಯಲ್ಲಿ ಇಂದು ಬೆಳಗ್ಗೆ ಇಬ್ಬರ ನಡುವೆ ಜಗಳವಾಗಿ ವಿಕೋಪಕ್ಕೆ ತಿರುಗಿದಾಗ ಕೃಷ್ಣಕುಮಾರಿ ಕೊಲೆ ಮಾಡಲಾಗಿದೆ. ಘಟನೆ ಸಂಬಂಧ ರಾಮೂರ್ತಿನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Similar News