ಮಂಗಳೂರು ಸ್ಫೋಟ ಪ್ರಕರಣದ ತನಿಖೆ ಎನ್ಐಎಗೆ ಹಸ್ತಾಂತರ

Update: 2022-12-01 06:14 GMT

ಮಂಗಳೂರು: ಮಂಗಳೂರು ಆಟೋದಲ್ಲಿ ಕುಕ್ಕರ್ ಸ್ಫೋಟ ಪ್ರಕರಣ‌ವನ್ನು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಎನ್ಐಎಗೆ (NIA) ಅಧಿಕಾರಿಗಳಿಗೆ ಗುರುವಾರ ಅಧಿಕೃತವಾಗಿ ಹಸ್ತಾಂತರ ಮಾಡಿದರು.

ಖುದ್ದು ಪೊಲೀಸ್ ಕಮಿಷನರ್ ನೇತೃತ್ವದಲ್ಲೇ ಆರೋಪಿ ಶಾರಿಕ್ ಹೇಳಿಕೆಯನ್ನು ಅಧಿಕಾರಿಗಳು ದಾಖಲಿಸಿಕೊಂಡರು. ಇಂದಿನಿಂದ ಎನ್ಐಎ ಅಧಿಕಾರಿಗಳು‌‌ ಆರೋಪಿ ಶಾರೀಕ್ ನಿಂದ ಪ್ರತ್ಯೇಕ ಹೇಳಿಕೆ ಪಡೆಯಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

ಇದನ್ನೂ ಓದಿ:  ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣ: ಎನ್‌ಐಎಯಿಂದ ಆರೋಪಿಯ ವಿಚಾರಣೆ?

Similar News