ಹುಬ್ಬಳ್ಳಿ|ಚಿಲುಮೆ ಮಾದರಿಯಲ್ಲಿ ಮತದಾರರ ಮಾಹಿತಿ ಸಂಗ್ರಹ ಆರೋಪ: ಮೂವರನ್ನು ಪೊಲೀಸರಿಗೆ ಒಪ್ಪಿಸಿದ ಕಾಂಗ್ರೆಸ್ ಮುಖಂಡರು

Update: 2022-12-01 10:39 GMT

ಹುಬ್ಬಳ್ಳಿ: ಅಲ್ಪಸಂಖ್ಯಾತ ಮತದಾರರು ಹೆಚ್ವಿರುವ ಕ್ಷೇತ್ರಗಳಲ್ಲಿ ಆ್ಯಪ್ ಮೂಲಕ ಸರ್ವೇ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸರ್ವೇ ಮಾಡುತ್ತಿದ್ದ ಮೂವರನ್ನು ಕಾಂಗ್ರೆಸ್ ಮುಖಂಡರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ನಡೆದಿದೆ.

ಅಲ್ಪಸಂಖ್ಯಾತ ಮತದಾರಿರುವ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಹಾಗೂ ಪಶ್ಚಿಮ ಮತದಾರರಿರುವ ಹುಬ್ಬಳ್ಳಿಯ ಆನಂದ್ ನಗರದಲ್ಲಿ ಮೂವರು ಸರ್ವೆ ನಡೆಸುತ್ತಿದ್ದರು. ಕಾಂಗ್ರೆಸ್ ಮುಖಂಡರಾದ ರಜತ್ ಉಳ್ಳಾಗಡ್ಡಿಮಠ ಹಾಗೂ ಆರೀಪ್ ಭದ್ರಾಪುರ ಅವರು ಸರ್ವೆ ಮಾಡುತ್ತಿದ್ದವರನ್ನು ವಿಚಾರಿಸಿದ್ದಾರೆ. ಆಗ ಸಮರ್ಪಕ ಉತ್ತರ ನೀಡದಿದ್ದಾಗ ಸರ್ವೇ ಮಾಡುತ್ತಿದ್ದ ಹರೀಶ್, ನಿತೇಶ್, ಮಂಜುನಾಥ್  ಎಂಬವರನ್ನು ಹಿಡಿದು ಹಳೇ ಹುಬ್ಬಳ್ಳಿ ಪೊಲೀಸರಿಗೆ ಒಪ್ಪಿಸಿರುವುದಾಗಿ ಕಾಂಗ್ರೆಸ್ ಮುಖಂಡರು ಮಾಹಿತಿ ನೀಡಿದ್ದಾರೆ.

ASR ಕನ್ಸಲ್ಟಿಂಗ್ ಸರ್ವಿಸ್ ಪ್ರೈವೆಟ್ ಲಿಮಿಟೆಡ್ ನಿಂದ ಅನುಮತಿ ಪಡೆದಿದೆ. ಪ್ರಿ ಪೋಲ್ ಸರ್ವೇ ಮಾಡೋದಾಗಿ ಹುಬ್ಬಳ್ಳಿ ಧಾರವಾಡ ಕಮೀಷನರ್ ಅವರಿಂದ ಸ್ವೀಕೃತಿ ಪತ್ರ ಪಡೆದುಕೊಂಡಿದೆ. ಇದೊಂದು ಚಿಲುಮೆ ಮಾದರಿಯ ಪ್ರಕರಣ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಇದು ಅಲ್ಪ ಸಂಖ್ಯಾತ ಮತಗಳ ಡಿಲೀಟ್ ಮಾಡೋ ಹುನ್ನಾರವಿದೆ. ಬಿಜೆಪಿ ನಾಯಕರು ಸೋಲಿನ ಭಯದಿಂದ ಸರ್ವೇ ಮಾಡಿಸುತ್ತಿದ್ದಾರೆ. ‌ಈ ಬಗ್ಗೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ‌ದೂರು ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುವಂತೆ ಕಾಂಗ್ರೆಸ್ ಕಾಂಗ್ರೆಸ್ ನಾಯಕ ರಜತ್ ಉಳ್ಳಾಗಡ್ಡಿಮಠ  ಒತ್ತಾಯಿಸಿದ್ದಾರೆ.

Similar News