ಪುತ್ತೂರು | ಅಣ್ಣ-ತಮ್ಮಂದಿರ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

Update: 2022-12-02 10:35 GMT

ಪುತ್ತೂರು, ಡಿ.2: ಕುಡಿತದ ಅಮಲಿನಲ್ಲಿ ಅಣ್ಣ-ತಮ್ಮಂದಿರ ಉಂಟಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ಗುರುವಾರ ರಾತ್ರಿ ನಡೆದಿದೆ.

 ಹಾವೇರಿ ಜಿಲ್ಲೆಯ ಹೊಸೂರು ನಿವಾಸಿ ಮಾದೇವಪ್ಪ ಕೊಲೆಯಾದವರು. ಅವರ ಅಣ್ಣ ನಿಂಗನ ಗೌಡ ಕೊಲೆ ಆರೋಪಿಯಾಗಿದ್ದು, ತಲೆಮರೆಸಿಕೊಂಡಿದ್ದಾನೆ.

ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಇವರಿಬ್ಬರು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಜಗಳವಾಡಿಕೊಂಡಿದ್ದರೆನ್ನಲಾಗಿದೆ. ಈ ವೇಳೆ ನಿಂಗನ ಗೌಡನಿಂದ ಹಲ್ಲೆಗೊಳಗಾದ ತಮ್ಮ ಮಾದೇವಪ್ಪ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಸಿದ್ದಾರೆ.

ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News