ಬೆಂಗಳೂರು | ಇಸ್ತ್ರಿಪೆಟ್ಟಿಗೆಯಲ್ಲಿ ಚಿನ್ನ ಸಾಗಾಟ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Update: 2022-12-03 13:14 GMT

ಬೆಂಗಳೂರು, ಡಿ. 3: ಇಸ್ತ್ರಿ ಪೆಟ್ಟಿಗೆ ಒಳಗಡೆ ಮರೆಮಾಚಿ ಚಿನ್ನ ಸಾಗಿಸುತ್ತಿದ್ದ ದುಬೈನಿಂದ ಬಂದ ಪ್ರಯಾಣಿಕನೊಬ್ಬನನ್ನು ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. 

ಕಳೆದ ನ.29ರಂದು ದುಬೈನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಯುವಕನ ಮೇಲೆ ಸಂಶಯಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನ ಬ್ಯಾಗ್ ಅನ್ನು ತಪಾಸಣೆ ನಡೆಸಿದಾಗ ಅನುಮಾನಾಸ್ಪದ ವಸ್ತು ಕಂಡು ಬಂದಿದೆ. 

ಬಳಿಕ ಅತ್ಯಾಧುನಿಕ ಸ್ಕ್ಯಾನರ್ ಮೂಲಕ ಪರಿಶೀಲಿಸಿದಾಗ ಇಸ್ತ್ರಿಪೆಟ್ಟಿಗೆ(ಐರನ್ ಬಾಕ್ಸ್) ಒಳಗಡೆ ಇಡಲಾಗಿದ್ದ ಚಿನ್ನ ಪತ್ತೆಯಾಗಿದೆ. ಸುಮಾರು 1.60 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

Similar News