ವಿದ್ಯಾರ್ಥಿವೇತನ ರದ್ದು : ವೆಲ್ಫೇರ್ ಪಾರ್ಟಿಯಿಂದ ರಾಷ್ಟ್ರಪತಿಗೆ ಮನವಿ
Update: 2022-12-03 14:14 GMT
ಉಡುಪಿ, ಡಿ.3: ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆಯಲ್ಲಿ ಬರುವ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಕೊಡ ಮಾಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಈ ವರ್ಷದಿಂದ ಕೇಂದ್ರ ಸರಕಾರ ರದ್ದುಗೊಳಿಸಿರುವುದನ್ನು ವಿರೋಧಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ನಿಯೋಗ ಶನಿವಾರ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು.
ರಾಷ್ಟ್ರಪತಿಗಳು ಮಧ್ಯಸ್ಥಿಕೆ ವಹಿಸಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯ ಬೇಕೆಂದು ನಿಯೋಗ ಒತ್ತಾಯಿಸಿದೆ. ಮನವಿಯನ್ನು ಉಡುಪಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಸ್ವೀಕರಿಸಿ ದರು. ನಿಯೋಗದಲ್ಲಿ ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ಉದ್ಯಾವರ, ಜಿಲ್ಲಾ ಕಾರ್ಯದರ್ಶಿ ರಝ್ಝಾಕ್ ಬೇಂಗ್ರೆ, ಕೋಶಾಧಿಕಾರಿ ರಿಯಾಝ್ ಅಹ್ಮದ್ ಮತ್ತು ಸದಸ್ಯ ಶಹಜಹಾನ್ ತೋನ್ಸೆ ಉಪಸ್ಥಿತರಿದ್ದರು.