ಬ್ಯಾರಿಕೇಡ್‍ಗೆ ಢಿಕ್ಕಿ ಹೊಡೆದ ಕಾರು: ಚಾಲಕ ಮೃತ್ಯು

Update: 2022-12-03 14:25 GMT

ಬೆಂಗಳೂರು, ಡಿ. 3:  ಕಾರೊಂದು   ಬ್ಯಾರಿಕೇಡ್‍ಗೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿರುವ ಘಟನೆ ಹೆಬ್ಬಾಳ ವ್ಯಾಪ್ತಿಯ ಬ್ಯಾಟರಾಯನಪುರ-ಕೊಡಿಗೇಹಳ್ಳಿ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.

ಮೃತರನ್ನು ದೇವನಹಳ್ಳಿಯ ನಿವಾಸಿ ಮಂಜುನಾಥ (31) ಎಂದು ಗುರುತಿಸಲಾಗಿದೆ.

ಬ್ಯಾಟರಾಯನಪುರ-ಕೊಡಿಗೇಹಳ್ಳಿ ಸರ್ವೀಸ್ ರಸ್ತೆಯಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಅದಕ್ಕಾಗಿ ಈ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ. 

ಶುಕ್ರವಾರ ತಡರಾತ್ರಿ ಇದೇ ಮಾರ್ಗವಾಗಿ ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರನ್ನು ಚಾಲನೆ ಮಾಡಿಕೊಂಡು ಬಂದ ಮಂಜುನಾಥ್ ಬ್ಯಾರಿಕೇಡ್‍ಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸುದ್ದಿ ತಿಳಿದು ಹೆಬ್ಬಾಳ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.  

Similar News