ಬೆಳ್ತಂಗಡಿ: ಎರ್ಮಾಯಿ ಫಾಲ್ಸ್ ನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

Update: 2022-12-03 15:00 GMT

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ನಲ್ಲಿ  ಸ್ನಾನಕ್ಕೆ ಇಳಿದಿದ್ದ ‌ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.

ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಎಂಬವರ ಪುತ್ರ ಉಜಿರೆಯ ಖಾಸಗಿ  ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ (17) ಮೃತಪಟ್ಟ ವಿದ್ಯಾರ್ಥಿ.

ಶನಿವಾರ ಮಧ್ಯಾಹ್ನ ನಂತರ ಕಾಲೇಜಿಗೆ ರಜೆ ಇದ್ದುದರಿಂದ ತನ್ನ ಆರೇಳು ಮಂದಿ ಸ್ನೇಹಿತರ ಜತೆ ಎರ್ಮಾಯಿ ಫಾಲ್ಸ್ ಗೆ‌ ಹೋಗಿ ಸ್ನಾನಕ್ಕೆ ಇಳಿದಿದ್ದ ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Similar News