ದತ್ತಪೀಠಕ್ಕೆ ಇಬ್ಬರು ಅರ್ಚಕರನ್ನು ನೇಮಿಸಿದ ರಾಜ್ಯ ಸರ್ಕಾರ

Update: 2022-12-03 17:50 GMT

ಚಿಕ್ಕಮಗಳೂರು, ಡಿ. 3:  ಬಾಬಾ ಬುಡಾನ್​ ಗಿರಿಯ ಶ್ರೀ ಗುರು ದತ್ತಾತ್ರೇಯ ಪೀಠ ಬಾಬಾಬುಡನ್​ ಸ್ವಾಮಿ ದರ್ಗಾ ಇಬ್ಬರು ಅರ್ಚಕರನ್ನು ನೇಮಕ ಸಂಬಂಧ ಮುಜರಾಯಿ ಇಲಾಖೆ ಆಯುಕ್ತರು ಜಿಲ್ಲಾಧಿಕಾರಿಗೆ ಅನುಮತಿ ಪತ್ರ ನೀಡಿದ್ದಾರೆ.

ಆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು, ಶೃಂಗೇರಿ ಮೂಲದ ಶ್ರೀಧರ್, ಚಿಕ್ಕಬಳ್ಳಾಪುರದ ಸಂದೀಪ್ ಎಂಬ ಇಬ್ಬರು ಅರ್ಚಕರ ತಾತ್ಕಾಲಿಕವಾಗಿ ನೇಮಿಸಿದ್ದಾರೆ.

ಹಿಂದೂ ಮುಸ್ಲಿಮರ ಸೌಹಾರ್ದ ಧಾರ್ಮಿಕ ಕೇಂದ್ರವಾಗಿದ್ದ ಗುರು ದತ್ತಾತ್ರೇಯ ಬಾಬಾಬುಡಾನ್ ಸ್ವಾಮಿ ದರ್ಗಾ ಕಳೆದ ಮೂರು ದಶಕಗಳಿಂದ ವಿವಾದಿತ ಕೇಂದ್ರವಾಗಿದ್ದು, ಈ ಸಂಬಂಧದ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ಇತ್ತೀಚೆಗೆ ರಾಜ್ಯ ಸರಕಾರ ನ್ಯಾಯಾಲಯದ ಆದೇಶದನ್ವಯ ಗುರು ದತ್ತಾತ್ರೇಯ ಬಾಬಾಬುಡಾನ್ ಸ್ವಾಮಿ ದರ್ಗಾದಲ್ಲಿ ಕೈಗೊಳ್ಳಬೇಕಾದ ಪೂಜಾ ವಿಧಾನಗಳ ಮೇಲ್ವಿಚಾರಣೆಗಾಗಿ 8 ಮಂದಿ ಸದಸ್ಯರನ್ನೊಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ರಚಿಸಿದ್ದು, ಈ ಸಮಿತಿ ಇತ್ತೀಚೆಗೆ ಸಭೆ ನಡೆಸಿ ಹಿಂದೂ ಅರ್ಚಕರ ನೇಮಕ ಸಂಬಂಧ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಪ್ರಸ್ತಾವ ಸಲ್ಲಿಸಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಶನಿವಾರ  ದತ್ತಪೀಠದಲ್ಲಿ ಪೂಜಾ ವಿಧಾನಗಳನ್ನು ನೆರವೇರಿಸಲು ಇಬ್ಬರು ಅರ್ಚಕರನ್ನು ನೇಮಕ ಮಾಡಿದೆ. 

Similar News