ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸುತ್ತಿದ್ದಂತೆ ಹೃದಯಾಘಾತವಾಗಿ ವ್ಯಕ್ತಿ ಸಾವು: ದೃಶ್ಯ ಸಿಸಿಟಿವಿಯಲ್ಲಿ ಸೆರೆ

Update: 2022-12-04 10:56 GMT

ಕಟ್ನಿ: ಮಧ್ಯಪ್ರದೇಶದ ಕಟ್ನಿಯಲ್ಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡುತ್ತಿದ್ದಂತೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೃತಪಟ್ಟವರನ್ನು ರಾಜೇಶ್‌ ಮೆಹಾನಿ ಎಂದು ಗುರುತಿಸಲಾಗಿದೆ ಎಂದು ndtv.com ವರದಿ ಮಾಡಿದೆ.

ಗುರುವಾರ ಈ ಘಟನೆ ನಡೆದಿದ್ದು, ಅಧಿಕಾರಿಗಳ ಪ್ರಕಾರ, ಮೃತ ವ್ಯಕ್ತಿ ಮೆಡಿಕಲ್ ಸ್ಟೋರ್ ನಡೆಸುತ್ತಿದ್ದು, ಪ್ರತಿ ಗುರುವಾರ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು.

ವಿಗ್ರಹದ ಬಳಿ ಪ್ರಾರ್ಥನೆಗೆಂದ ಕೂತ ವ್ಯಕ್ತಿ ಹದಿನೈದು ನಿಮಿಷವಾದರೂ ಅಲ್ಲಿಂದ ಏಳದ್ದರಿಂದ ಅನುಮಾನ ಬಂದ ದೇವಸ್ಥಾನ ಅರ್ಚಕರು ಪರಿಶೀಲಿಸಿದ್ದಾರೆ. ಈ ವೇಳೆ ರಾಜೇಶ್‌ ಪ್ರಜ್ಞೆ ತಪ್ಪಿದ್ದು ತಿಳಿದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆ ತಲುಪುವಾಗಲೇ ರಾಜೇಶ್‌ ಮೃತಪಟ್ಟಿರುವುದಾಗಿ ವರದಿಯಾಗಿದೆ.

Similar News