ಬೆಂಗಳೂರು | ಟೆಕ್ಕಿ ಅಪಹರಣ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

Update: 2022-12-04 14:12 GMT

ಬೆಂಗಳೂರು, ಡಿ. 4: ಟೆಕ್ಕಿಯೊರ್ವನ ಅಪಹರಣ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿರುವ ಇಲ್ಲಿನ ಅಶೋಕನಗರ ಠಾಣಾ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಸಾಫ್ಟ್‍ವೇರ್ ಇಂಜಿನಿಯರ್ ರಾಹುಲ್ ವೈರಾಧ್ಯ ಎಂಬುವರನ್ನು ಅಪಹರಿಸಿದ ಆರೋಪದಡಿ ತರುಣ್ ಗಣೇಶ್, ಮಣಿಕಂಠ, ವಿಘ್ನೇಶ್ ಹಾಗೂ ಚೇರಿಶ್ ಎಂಬುವರನ್ನು ಬಂಧಿಸಲಾಗಿದೆ. 

ಹೂಡಿಯ ಸೀತರಾಮಪಾಳ್ಯ ನಿವಾಸಿಯಾಗಿರುವ ರಾಹುಲ್ ನ.26ರಂದು ಕಾರಿನಲ್ಲಿ ಕಲ್ಯಾಣ ನಗರಕ್ಕೆ ತೆರಳಿದಾಗ ದುಷ್ಕರ್ಮಿಗಳು ಅಪಹರಣ ಮಾಡಿದ್ದರು. ಈ ಸಂಬಂಧ ದಾಖಲಾದ ದೂರಿನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Similar News