ಭಟ್ಕಳ: ಆಂಬುಲೆನ್ಸ್‌ಗೆ ಅಡ್ಡ ಬಂದ ಹಸು; ವಾಹನಕ್ಕೆ ಹಾನಿ

Update: 2022-12-04 14:25 GMT

ಭಟ್ಕಳ: ಹೊನಾವರದಿಂದ ಮಂಗಳೂರಿಗೆ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಹಸುವಿಗೆ ಢಿಕ್ಕಿ ಹೊಡೆದ ಪರಿಣಾಮ ಆಂಬುಲೆನ್ಸ್ ಹಾನಿಯಾಗಿರುವ ಘಟನೆ ಶನಿವಾರ ತಡರಾತ್ರಿ ಭಟ್ಕಳದ ಪೆಟ್ರೋಲ್ ಬಂಕ್ ಬಳಿ ಸಂಭಿವಿಸಿದೆ.

ಆಂಬುಲೆನ್ಸ್ ನಲ್ಲಿ ಪ್ರಯಾಣಿಸುತ್ತಿದ್ದ ರೋಗಿ ಹಾಗೂ ಅವರ ಕುಟುಂಬದವರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಭಟ್ಕಳದ ಮೌಲಾನಾ ಅಬ್ದುಲ್ ಬಾರಿ ಟ್ರಸ್ಟ್‌ನ ಈ ಆಂಬ್ಯುಲೆನ್ಸ್ ಹೊನಾವರದಿಂದ ಮಂಗಳೂರಿಗೆ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದಾಗ ಭಟ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಸುವೊಂದು ಅಡ್ಡ ಬಂದಿದ್ದು ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

Similar News