ಶಿವಮೊಗ್ಗ: ಬಿಜೆಪಿ ಸೇರಿದ ಕೆ.ಎಸ್.ಪ್ರಶಾಂತ್, ಡಾ. ಧನಂಜಯ್ ಸರ್ಜಿ

Update: 2022-12-04 15:44 GMT

ಶಿವಮೊಗ್ಗ: ಮುಂದಿನ  ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇದ್ದಾಗಲೇ ಶಿವಮೊಗ್ಗ ಸೊರಬ, ಶಿಕಾರಿಪುರ ಬಳಿಕ ಸಾಗರ ಹಾಗೂ ಶಿವಮೊಗ್ಗ ಕ್ಷೇತ್ರದ ಪ್ರಮುಖರು ಬಿಜೆಪಿ ಸೇರ್ಪಡೆಯಾದರು. 

ರವಿವಾರ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಗರದ ಕೆ.ಎಸ್.ಪ್ರಶಾಂತ್ ಹಾಗೂ ಖ್ಯಾತ ಮಕ್ಕಳ ತಜ್ಞ ಡಾ ಧನಂಜಯ್ ಸರ್ಜಿ ಬಿಜೆಪಿಗೆ ಸೇರ್ಪಡೆಯಾದರು.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಇವರುಗಳು ಬಿಜೆಪಿ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಶಾಸಕರಾದ ಆಯನೂರು ಮಂಜುನಾಥ್, ಡಿ.ಎಸ್.ಅರುಣ್, ಎಸ್.ರುದ್ರೇಗೌಡ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಉಪಸ್ಥಿತರಿದ್ದರು.

ಮಾಜಿ ಸಂಸದ ಕೆ.ಜಿ.ಶಿವಪ್ಪ ಅವರ ಪುತ್ರ, ಸಾಗರದ ಯುವ ಮುಖಂಡರಾಗಿರುವ ಕೆ.ಎಸ್.‌ಪ್ರಶಾಂತ್ ಈ ಹಿಂದೆ ರಾಜಕೀಯವಾಗಿ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು.ಪ್ರಶಾಂತ್ ಈ ಬಾರಿ ಚುನಾವಣೆಗೆ ಸಾಗರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಶಿವಮೊಗ್ಗ ನಗರದ ಖ್ಯಾತ ಮಕ್ಕಳ ತಜ್ಞರಾಗಿರುವ ಡಾ.ಧನಂಜಯ್ ಸರ್ಜಿ ಅವರು ಸಾಮಾಜಿಕ ಕಾರ್ಯಕ್ರಮದ ಶಿವಮೊಗ್ಗದಲ್ಲಿ ಗುರುತಿಸಿಕೊಂಡಿದ್ದಾರೆ.

Similar News