ಹೆಬ್ರಿ: ಸೆಗಣಿ ಗುಂಡಿಗೆ ಬಿದ್ದು ಮಗು ಮೃತ್ಯು

Update: 2022-12-05 15:29 GMT

ಹೆಬ್ರಿ, ಡಿ.5: ಸಗಣಿ ಗುಂಡಿಗೆ ಕಾಲು ಜಾರಿ ಬಿದ್ದು ಮಗುವೊಂದು ಮೃತಪಟ್ಟ ಘಟನೆ ಡಿ.4ರಂದು ಮಧ್ಯಾಹ್ನ ವೇಳೆ ಹೆಬ್ರಿ ಗ್ರಾಮದ ಬಚ್ಚಪ್ಪು ಎಂಬಲ್ಲಿ ನಡೆದಿದೆ.

ಮೃತ ಮಗುವನ್ನು ಜಾರ್ಖಂಡ್ ಮೂಲದ ಸೋಮೆಶ್ವರ ಓಕಾನ್ ಎಂಬವರ ಪುತ್ರ ಮುನೇಶ್ವರ (4) ಎಂದು ಗುರುತಿಸಲಾಗಿದೆ.

ಓಕಾನ್ ಕಳೆದ 6 ವರ್ಷಗಳಿಂದ ಆಂಟನಿ ಎಂಬವರ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡು ಅಲ್ಲಿಯೇ ಬಿಡಾರದಲ್ಲಿ ವಾಸ ಮಾಡಿಕೊಂಡಿದ್ದರು. ಇವರ ಮಗು ತೋಟದಲ್ಲಿ ಆಟ ಆಡುತ್ತಿರುವಾಗ ಸಗಣಿ ಗುಂಡಿಯಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮೃತ ಪಟ್ಟಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News