ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿಯ ಕೊಲೆಗೈದ ಪತಿ

Update: 2022-12-05 16:46 GMT

ಬೆಂಗಳೂರು, ಡಿ.5: ಕೈ, ಕಾಲುಗಳ ಸ್ವಾಧೀನ ಕಳೆದುಕೊಂಡು ಕಾಯಿಲೆಯಿಂದ ಬಳಲುತ್ತಿದ್ದ ಪತ್ನಿಯನ್ನು ಕೊಲೆಗೈದಿರುವ ಘಟನೆ ಇಲ್ಲಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಿವಮ್ಮ (50) ಎಂಬುವರು ಕೊಲೆಯಾಗಿರುವ ಮಹಿಳೆಯಾಗಿದ್ದು, ಈಕೆಯ ಪತಿ ಶಂಕರಪ್ಪ(60) ಈ ಕೃತ್ಯವೆಸಗಿದ್ದಾರೆ ಎಂದು ಹೇಳಲಾಗುತ್ತಿದೆ.

ಶಿವಮ್ಮ ಎರಡು ವರ್ಷದ ಹಿಂದೆ ಕೈ-ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದು, ಹಾಸಿಗೆಯಲ್ಲಿಯೇ ಮಲಗುತ್ತಿದ್ದರು. ಪ್ರತಿನಿತ್ಯ ದುಡಿಮೆಯ ಜೊತೆಗೆ ತನ್ನ ಪತ್ನಿಯನ್ನು ನೋಡಿಕೊಳ್ಳುವ ಜವಾಬ್ದಾರಿಯಿಂದ ಶಂಕರಪ್ಪನಿಗೆ ಬೇಸರ ಉಂಟಾಗಿ ರವಿವಾರ ಮಧ್ಯಾಹ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ತಲ್ಲಘಟ್ಟಪುರ ಠಾಣಾ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

Similar News