ರಾಯಚೂರು | ರಸ್ತೆ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು, ಮತ್ತೋರ್ವ ಗಂಭೀರ

Update: 2022-12-06 06:43 GMT

ರಾಯಚೂರು: ಸರ್ಕಾರಿ‌ ಬಸ್ ಬೈಕ್‌ಗೆ ಢಿಕ್ಕಿಯಾದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡ‌ ಘಟನೆ ಗುಡದೂರು ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ನಡೆದಿರುವುದಾಗಿ ವರದಿಯಾಗಿದೆ.

ಮೃತರನ್ನು ನಾಗರಾ, ಸೀನು, ಜಯಪಾಲ ಎಂದು ಗುರುತಿಸಲಾಗಿದ್ದು, ಶ್ರೀಕಾಂತ ಎಂಬಾತ ಗಂಭೀರ ಗಾಯಗೊಂಡಿದ್ದಾರೆ. ಇವರೆಲ್ಲರೂ ಆಂಧ್ರಪ್ರದೇಶದ ನಂದ್ಯಾಲದ ನಿವಾಸಿಗಳು ಎಂದು ತಿಳಿದುಬಂದಿದೆ.

ಈ ಸಂಬಂಧ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News