ಡಾ.ಸಿ.ಎನ್.ಮಂಜುನಾಥ ಸೇರಿ ಮೂವರಿಗೆ ಹಂಪಿ ಕನ್ನಡ ವಿವಿ ನಾಡೋಜ ಪದವಿ

ಡಿ. 8ರಂದು ವಿವಿಯ ಘಟಿಕೋತ್ಸವ

Update: 2022-12-06 13:01 GMT

ಹೊಸಪೇಟೆ: ಹಂಪಿ ಕನ್ನಡ ವಿವಿ ಪ್ರತಿ ವರ್ಷ ನೀಡುವ ನಾಡೋಜ ಗೌರವ ಪದವಿಗೆ ಈ ವರ್ಷ ಸಾಹಿತ್ಯ ಮತ್ತು ಸಾಮಾಜಿಕ ಸೇವಾ ಕ್ಷೇತ್ರದ ಕೃಷ್ಣಪ್ಪ,  ಜಿ., ಎಸ್.ಷಡಕ್ಷರಿ ಮತ್ತು ಆರೋಗ್ಯ ಕ್ಷೇತ್ರದಿಂದ ಡಾ.ಸಿ.ಎನ್.ಮಂಜುನಾಥ ಅವರರನ್ನು ಆಯ್ಕೆ ಮಾಡಲಾಗಿದೆ. 

ಡಿಸೆಂಬರ್ 8ರಂದು ನಡೆಯುವ ವಿವಿಯ 31ನೇ ನುಡಿಹಬ್ಬ- ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಈ ಪದವಿಗಳನ್ನು ಪ್ರದಾನ ಮಾಡಲಿದ್ದಾರೆ.

ಸಂಸ್ಕೃತ ವಿವಿಯ ವಿಶ್ರಾಂತ ಕುಲಪತಿ ಡಾ.ಮಲ್ಲೇಪುರಂ ಜಿ. ವೆಂಕಟೇಶ್ ಅವರು ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಅವರು ಪಿಎಚ್ ಡಿ ಮತ್ತು ಎಂ.ಫಿಲ್ ಪದವಿಗಳನ್ನು ನೀಡಲಿದ್ದಾರೆ.

Similar News