ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ

Update: 2022-12-06 12:58 GMT

ಮಂಗಳೂರು, ಡಿ.6: ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಿರ್ಮಿಸಲಾದ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಲೋಕಾರ್ಪಣೆ ಮಾಡಿದರು.

ಈ ಸಂದರ್ಭ ಛತ್ತೀಸ್‌ಘರ್ ತೋಟಗಾರಿಕೆ, ಅರಣ್ಯ ಹಾಗೂ ದುರ್ಗ್ ಮಹಾತ್ಮಾ ಗಾಂಧಿ ವಿಶ್ವವಿದ್ಯಾನಿಲಯ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸಮಾಜ ವಿಜ್ಞಾನ ಹಾಗೂ ಮಾಹು ವಿಶ್ವವಿದ್ಯಾನಿಲಯ ಸಂಸ್ಥಾಪಕ ಕುಲಪತಿ ಪ್ರೊ. ಆರ್.ಎಸ್.ಕುರೀಲ್, ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಪಿ. ಸುಬ್ರಮಣ್ಯ ಯಡಪಡಿತ್ತಾಯ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

Similar News