ಹಾಸನದಲ್ಲಿ ರಸ್ತೆ ಅಪಘಾತ: ಕೊಡಗಿನ ಇಬ್ಬರು ಸ್ಥಳದಲ್ಲೇ ಮೃತ್ಯು

Update: 2022-12-06 13:48 GMT

ಸಿದ್ದಾಪುರ (ಕೊಡಗು), ಡಿ.6: ಹಾಸನ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೊಡಗಿನ ಇಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಮೃತರನ್ನು ವಿರಾಜಪೇಟೆ ತಾಲೂಕಿನ ಸಿದ್ದಾಪುರದ ಮಾರ್ಕೆಟ್ ರಸ್ತೆ ನಿವಾಸಿಗಳಾದ ಉಮರ್ (47) ಮತ್ತು ಮೂರ್ತಿ (39) ಎಂದು ಗುರುತಿಸಲಾಗಿದೆ. 

ಮೂರ್ತಿಯ ಕೈ ಚಿಕಿತ್ಸೆಗೆಂದು ಹಾಸನ ಜಿಲ್ಲೆಯ ಅರಕಲಗೋಡಿಗೆ ಬೈಕಿನಲ್ಲಿ ತೆರಳಿದ ಇಬ್ಬರು, ಹಿಂತಿರುಗಿ ಬರುತ್ತಿದ್ದ ಸಂದರ್ಭ ಗೂಡ್ಸ್ ವಾಹನಕ್ಕೆ ಬೈಕ್  ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Similar News