ಕಾನೂನು ಕೈಗೆತ್ತಿಕೊಳ್ಳುವ ರೌಡಿಗಳನ್ನು ಮಟ್ಟ ಹಾಕಿ: ಪೊಲೀಸ್ ಇಲಾಖೆಗೆ ಸೂಚನೆ ನೀಡಿದ ಶಾಸಕ ಯು.ಟಿ. ಖಾದರ್
Update: 2022-12-06 17:35 GMT
ಮಂಗಳೂರು, ಡಿ.6: ನಗರದ ಕಂಕನಾಡಿಯಲ್ಲಿರುವ ಖಾಸಗಿ ಮಳಿಗೆಯಲ್ಲಿ ಕೆಲಸ ಮಾಡುತ್ತಿರುವ ಯುವಕ ಯುವತಿಯ ವಿಚಾರಕ್ಕೆ, ಅವರ ಹೆತ್ತವರು ಅಥವಾ ಅವರಿಗೆ ಸಂಬಂಧಪಟ್ಟವರು ಅಲ್ಲದ ಹೊರಗಿನವರು ಬಂದು ಕಾನೂನು ಕೈಗೆತ್ತಿಕೊಂಡು ಹಲ್ಲೆ ನಡೆಸಿ ರೌಡಿಗಳ ತರಹ ದಾಂಧಲೆ ಮಾಡಿದ್ದು ಸರಿಯಲ್ಲ, ಈ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆಸಿ ಕಾನೂನು ಕೈಗೆತ್ತಿಕೊಳ್ಳುತ್ತಿರುವ ರೌಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಶಾಸಕ, ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ತನಿಖೆ ನಡೆಸಿ, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಇಲಾಖೆ ಭರವಸೆ ನೀಡಿದ್ದಾರೆ.