ಅತೀ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹ; ಕೆಎಸ್ಸಾರ್ಟಿಸಿಗೆ 8ನೇ ಬಾರಿಗೆ ಪ್ರಶಸ್ತಿ

Update: 2022-12-07 15:35 GMT

ಬೆಂಗಳೂರು, ಡಿ.7:ರಾಜ್ಯದ ಸರಕಾರಿ ಸಂಸ್ಥೆಗಳ ಪೈಕಿ ಅತೀ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಣಾ ಮಾಡಿರುವ ವಿಶೇಷ ಪ್ರಶಸ್ತಿಗೆ ಸತತ ಎಂಟನೆ ಬಾರಿಗೆ ಕೆಎಸ್ಸಾರ್ಟಿಸಿ ಸಂಸ್ಥೆ ಭಾಜನವಾಗಿದೆ.

ಬುಧವಾರ ರಾಜಭವನದಲ್ಲಿ ನಡೆದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೆಎಸ್ಸಾರ್ಟಿಸಿ ನಿರ್ದೇಶಕ ಡಾ.ನವೀನ್ ಭಟ್ ಅವರಿಗೆ ಪ್ರದಾನಿಸಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಬ್ರಿಗೇಡಿಯರ್ ಎಂ. ಬಿ.ಶಶಿಧರ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಅಧಿಕಾರಿಗಳು ಸೇರಿದಂತೆ ಪ್ರಮುಖರಿದ್ದರು.

Similar News