ಡಿ.10: ಮಂಗಳೂರು ಧರ್ಮಕ್ಷೇತ್ರದ ಪಾಲನಾ ಪರಿಷತ್ತಿನ ಸುವರ್ಣ ಮಹೋತ್ಸವ

Update: 2022-12-07 16:31 GMT

ಮಂಗಳೂರು: ಮಂಗಳೂರು ಧರ್ಮಕ್ಷೇತ್ರದ ಪಾಲನಾ ಪರಿಷತ್ತಿನ ಸುವರ್ಣ ಮಹೋತ್ಸವವು ಡಿ.10ರಂದು ನಗರದ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್‌ನಲ್ಲಿ ಮಂಗಳೂರಿನ ಧರ್ಮ ಪ್ರಾಂತದ ಧರ್ಮಾಧಕ್ಷ ಅ.ವಂ. ಫೀಟರ್ ಪೌಲ್ ಸಲ್ದಾನರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಗೋವಾ ಮತ್ತು ದಮನ್ ಕಾರ್ಡಿನಲ್ ಫಿಲಿಪ್ ನೆರಿ ಫೆರಾವೊ, ಬೆಂಗಳೂರಿನ ಆರ್ಚ್ ಬಿಷಪ್ ಅತೀ ವಂ.ಡಾ. ಪೀಟರ್ ಮಚಾದೊ, ಮಂಗಳೂರು ಧರ್ಮಕ್ಷೇತ್ರದ ನಿವೃತ ಬಿಷಪ್ ಅ.ವಂ.ಡಾ. ಅಲೋಶಿಯಸ್ ಪೌಲ್ ಡಿಸೋಜ, ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಜಾನ್ ಮೈಕೆಲ್ ಡಿಕುನ್ಹಾ, ಅನಿವಾಸಿ ಭಾರತೀಯ ಉದ್ಯಮಿ ರೊನಾಲ್ಡ್ ಕೊಲಾಸೊ, ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮಾಜಿ ನಿರ್ದೇಶಕ ಫಿಲೋಮಿನಾ ಲೋಬೋ ಮತ್ತಿತರರು ಭಾಗವಹಿಸು ವರು ಎಂದು ಕಾರ್ಯಕ್ರಮದ ಸಂಚಾಲಕ ನ್ಯಾಯವಾದಿ ಎಂ.ಪಿ. ನೊರೊನ್ಹಾ ತಿಳಿಸಿದ್ದಾರೆ.

ಬೆಳಗ್ಗೆ 8.45ಕ್ಕೆ ಪವಿತ್ರ ಬಲಿಪೂಜೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಸುವರ್ಣ ಮಹೋತ್ಸವದ ಸವೆನೆನಪಿಗಾಗಿ ಸ್ಮರಣ ಸಂಚಿಕೆ ಹಾಗೂ ಕಿರು ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಾಗುವುದು ಎಂದು ಧರ್ಮಕ್ಷೇತ್ರದ ಪಾಲನಾ ಪರಿಷತ್ತಿನ ಪ್ರಸ್ತುತ ಕಾರ್ಯದರ್ಶಿ ಡಾ. ಜಾನ್ ಡಿಸಿಲ್ವಾ ತಿಳಿಸಿದ್ದಾರೆ.

Similar News