ಪುತ್ತೂರು | ಕೆಎಸ್ಸಾರ್ಟಿಸಿ ನಿರ್ವಾಹಕನಿಗೆ ಹಲ್ಲೆ ಆರೋಪ: ದೂರು ದಾಖಲು

Update: 2022-12-08 10:30 GMT

ಪುತ್ತೂರು: ಕೆಎಸ್ಸಾರ್ಟಿಸಿ ಬಸ್ಸು ನಿರ್ವಾಹಕನಿಗೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆಎಸ್ಸಾರ್ಟಿಸಿ ಬಸ್ಸಿನ ಚಾಲಕ ಮತ್ತು ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹಾಸನ ಮೂಲಕ ಹೆಚ್.ಟಿ. ದ್ರುವ(43) ದೂರು ನೀಡಿದ ವ್ಯಕ್ತಿ.

ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಹೆಚ್.ಟಿ. ದ್ರುವ ಅವರು ಬುಧವಾರ ರಾತ್ರಿ ಪುತ್ತೂರಿನ ಬಸ್ಸು ನಿಲ್ದಾಣದಲ್ಲಿ ಟಿಕೇಟ್ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವ ನನ್ನನ್ನು ಅವ್ಯಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರಿಗೆ ನೀಡಿದ ಆರೋಪಿಸಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News