ಗುಜರಾತ್ ಚುನಾವಣಾ ಫಲಿತಾಂಶ: ಬಿಜೆಪಿ ವಿಜಯೋತ್ಸವ

Update: 2022-12-08 14:00 GMT

ಉಡುಪಿ, ಡಿ.8: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ಫಲಿತಾಂಶ ಮುಂದಿನ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ದಿಕ್ಸೂಚಿ ಯಾಗಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ಕೆ.ಉದಯ ಕುಮಾರ ಶೆಟ್ಟಿ ಹೇಳಿದ್ದಾರೆ.

ಗುಜರಾತ್ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿನ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ಗುರುವಾರ ಕಡಿಯಾಳಿಯ ಜಿಲ್ಲಾ ಕಛೇರಿಯ ಬಳಿ ಹಮ್ಮಿಕೊಂಡ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗುಜರಾತ್ ಹಾಗೂ ಕರ್ನಾಟಕ ಅಭಿವೃದ್ಧಿ ಹಾಗೂ ಹಿಂದುತ್ವ ಮುಂತಾದ ವಿಚಾರಗಳಲ್ಲಿ ಸ್ವಾಮ್ಯತೆಯನ್ನು ಹೊಂದಿದೆ. ಈ ಹಿನ್ನಲೆಯಲ್ಲಿ ಜನಾಭಿಪ್ರಾಯ ದಂತೆ ಕರ್ನಾಟಕದಲ್ಲೂ ಬಿಜೆಪಿ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಭರ್ಜರಿ ವಿಜಯ ದಾಖಲಿಸಲಿದೆ ಎಂದವರು ಭವಿಷ್ಯ ನುಡಿದರು.

ಈಗಾಗಲೇ ಪಕ್ಷದ ಹಿರಿಯರು ಹಾಗೂ ರಾಷ್ಟ್ರೀಯ ಮತ್ತು ರಾಜ್ಯ ಘಟಕದ ಯೋಜನೆಯಂತೆ 150ಕ್ಕೂ ಮಿಕ್ಕಿ ಸ್ಥಾನಗಳನ್ನು ಗೆಲ್ಲುವ ಗುರಿಯೆಡೆಗೆ ಪೂರ್ಣ ಪ್ರಮಾಣದ ತಯಾರಿ ಪ್ರಗತಿಯಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸು ಹಾಗೂ ಅಭಿವೃದ್ಧಿಪರ ಆಡಳಿತದ ಪ್ರತಿಫಲನದ ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕದ ಗುರಿಯನ್ನು ತಲುಪಲು ಇನ್ನಷ್ಟು ಪ್ರೇರಣೆ ನೀಡಲಿದೆ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಂ. ಸುವರ್ಣ ಅವರೂ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ ಎಸ್. ಕಲ್ಮಾಡಿ, ಪ್ರಕೋಷ್ಠಗಳ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಸಲೀಂ ಅಂಬಾಗಿಲು, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಷ್ಮಿತಾ ಬಿ. ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ ಉದ್ಯಾವರ ಮುಂತಾದವರು ಉಪಸ್ಥಿತರಿದ್ದರು.

Similar News