ಗುರುಪುರ: ಉಚಿತ ವೈದ್ಯಕೀಯ ಶಿಬಿರ

Update: 2022-12-08 15:05 GMT

ಗುರುಪುರ: ಗುರುಪುರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ದೇರಳಕಟ್ಟೆಯ ಯೆನೆಪೊಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದಲ್ಲಿ ಗುರುಪುರ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತ ದಂತ, ಕಣ್ಣು, ಕಿವಿ ತಪಾಸಣೆ ಮತ್ತು ರಕ್ತ ಪರೀಕ್ಷಾ ಶಿಬಿರ ನಡೆಸಲಾಯಿತು.

ಗುರುಪುರ ಗ್ರಾಪಂ ಅಧ್ಯಕ್ಷ ಯಶವಂತ ಕುಮಾರ್ ಶೆಟ್ಟಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ಲಯನ್ಸ್ ಕ್ಲಬ್ ಮಂಗಳೂರು ಸ್ಮಾರ್ಟ್ ಸಿಟಿ ಅಧ್ಯಕ್ಷ ಜಿ.ಕೆ. ಹರಿಪ್ರಸಾದ್ ರೈ, ಲಯನ್ಸ್ ಪ್ರಾಂತೀಯ ಅಧ್ಯಕ್ಷೆ ಜ್ಯೋತಿ ಎಸ್. ಶೆಟ್ಟಿ, ಲಯನ್ಸ್ ಕ್ಲಬ್ ಕುಡ್ಲ ಮಾಜಿ ಅಧ್ಯಕ್ಷ ಶ್ರೀಧರ ಶೆಟ್ಟಿ, ಡಾ.ಭರತ್ ಕುಮಾರ್, ಡಾ. ಸಿರಾಜ್, ಡಾ. ದಿವ್ಯಾ, ಡಾ. ಆದಿಕಾ, ಪಿಆರ್‌ಒ ಭಾಸ್ಕರ್, ರಂಜಿತ್ ಶೆಟ್ಟಿ ಉಪಸ್ಥಿತರಿದ್ದರು.

ಪ್ರಾಂಶುಪಾಲ ಚಂದ್ರಶೇಖರ ಸ್ವಾಗತಿಸಿದರು. ಉಪನ್ಯಾಸಕಿ ಯಶೋದಾ ಕೆ. ಕಾರ್ಯಕ್ರಮ ನಿರೂಪಿಸಿದರು.

Similar News